ಬೆಳ್ತಂಗಡಿ: ಆಟವಾಡುತ್ತಿದ್ದ ಮಗು ಕೆರೆಗೆ ಬಿದ್ದು ಮೃತ್ಯು
ಬೆಳ್ತಂಗಡಿ: ಆಟವಾಡುತ್ತಿದ್ದ ಮಗು ತೋಟದಲ್ಲಿದ್ದ ಕೆರೆ ಬಳಿಗೆ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜ.22 ರಂದು ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಮಗ ರೇಯನ್ ಡಿಸೋಜಾ(2. ವ) ಕೆರೆಗೆ ಬಿದ್ದು ಸಾವನ್ನಪ್ಪಿದ ಮಗು.
ತಕ್ಷಣ ಮನೆಯವರು ಮತ್ತು ಸ್ಥಳೀಯರ ಸಹಕಾರದಲ್ಲಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಮಗು ಸಾವನ್ನಪ್ಪಿದೆ. ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.