ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ)  ಅಧಿಸೂಚನೆ ಹೊರಡಿಸಿದ ಕೇಂದ್ರ ಸರಕಾರ



ಕೇಂದ್ರ ಸರ್ಕಾರವು ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ( ಸಿಎಎ)  ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕಿದ್ದರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಇತ್ತೀಚೆಗೆ ಸಿಎಎ ಜಾರಿಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಸಿಎಎ ಅಧಿಸೂಚನೆ ಹೊರಡಿಸಲಾಗಿದೆ.

2014ರ ಡಿ.31ಕ್ಕೂ ಮೊದಲು ಭಾರತಕ್ಕೆ ಆಗಮಿಸಿದವರಿಗೆ ನಿಯಮ ಅನ್ವಯವಾಗುತ್ತದೆ. ಈ ಮೊದಲು 11 ವರ್ಷ ಭಾರತದಲ್ಲೇ ನೆಲೆಸಿದವರಿಗೆ ಅವಕಾಶವಿತ್ತು. ಆದ್ರೆ, ಈಗ ತಿದ್ದುಪಡಿ ಮಾಡಿ 11 ವರ್ಷದಿಂದ ಈಗ 5 ವರ್ಷಕ್ಕೆ ಇಳಿಸಲಾಗಿದ್ದು, ಮುಸ್ಲಿಮರನ್ನು ಹೊರತುಪಡಿಸಿದ ವ್ಯಕ್ತಿಗಳು 6 ವರ್ಷ ಕಾಲ ಅಥವಾ ಅದಕ್ಕೂ ಮೇಲ್ಪಟ್ಟು ಭಾರತದಲ್ಲೇ ವಾಸ ಮಾಡಿದ್ದರೆ ಅಂಥವರಿಗೆ ಪೌರತ್ವ ನೀಡಲಾಗುತ್ತದೆ. ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್, ಪಾರ್ಸಿಗಳಿಗೆ ಪೌರತ್ವ ನೀಡಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!