ರಾಜಕೀಯರಾಜ್ಯ

ಗೃಹಲಕ್ಷ್ಮಿ ಯೋಜನೆ ಹಣವನ್ನು  ಕಾಂಗ್ರೆಸ್ ಅಭ್ಯರ್ಥಿಗೆ ನೀಡಿದ ಮಹಿಳೆ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ನೀಡುವ 2000 ಹಣವನ್ನು ಮಹಿಳೆಯೊಬ್ಬರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ಅವರಿಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಚಿಕ್ಕಮಗಳೂರು ನಗರದ 10ನೇ ವಾರ್ಡಿನಲ್ಲಿ ಪ್ರಚಾರಕ್ಕೆ ಬಂದ ವೇಳೆ ಮಹಿಳೆ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಬಂದ 2000 ರೂಪಾಯಿ ಹಣವನ್ನ ಚುನಾವಣೆ ಖರ್ಚಿಗೆ ಬಳಸಿಕೊಳ್ಳಿ ಎಂದು ಜಯಪ್ರಕಾಶ್ ಹೆಗಡೆ ಅವರಿಗೆ ದೇಣಿಗೆ ನೀಡಿದ್ದು ಸಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಕೊಂಡಾಡಿದ್ದಾರೆ.

ನನ್ನ ಈ ಹಣವನ್ನು ನಿಮ್ಮ ಚುನಾವಣಾ ಖರ್ಚಿಗೆ ಬಳಸಿಕೊಂಡು ಗೆಲುವು ಸಾಧಿಸಿ ಇನ್ನಷ್ಟು ಉತ್ತಮ ಕೆಲಸ ಮಾಡಿ ಎಂದು ಅವರು ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!