ಕರಾವಳಿಕ್ರೈಂ

ಬಾವಿಗೆ ರಿಂಗ್‌ ಹಾಕುವಾಗ ಆಮ್ಲಜನಕ ಸಿಗದೆ ಇಬ್ಬರು ಮೃತ್ಯು

ಬಾವಿಗೆ ರಿಂಗ್‌ ಹಾಕುವಾಗ ಆಮ್ಲಜನಕ ಸಿಗದೆ ಇಬ್ಬರು ಮೃತಪಟ್ಟ ಘಟನೆ ವಿಟ್ಲ ಜಿಲ್ಲೆಯ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.



ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ  ಇಬ್ರಾಹಿಂ (40 ವ) ಮತ್ತು ಮಲಾರ್‌ ನಿವಾಸಿ ಆಲಿ (24 ವ) ಎಂದು ಗುರುತಿಸಲಾಗಿದೆ.
ಸುಮಾರು 30 ಅಡಿ ಆಳದ ಬಾವಿಗೆ ರಿಂಗ್‌ ಹಾಕಿ ನಂತರ ಕ್ಲೀನಿಂಗ್‌ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದರು. ಬಾವಿಗೆ ಇಳಿದವನು ಮೇಲಕ್ಕೆ ಬಾರದೆ ಇದ್ದಾಗ ಅವನನ್ನು ನೋಡಲು ಇನ್ನೊಬ್ಬ ಕಾರ್ಮಿಕ ಇಳಿದಿದ್ದು, ಅವರೂ ಆಮ್ಲಜನಕದ ಕೊರತೆಯಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!