ಮಂಗಳೂರು: ಬಸ್ಸಿಗೆ ಕಲ್ಲೆಸೆದ ಪ್ರಕರಣ: ಮೂವರು ಆರೋಪಿಗಳ ಬಂಧನ
ಮಂಗಳೂರು: ಮಂಗಳೂರಿನಲ್ಲಿ ಇಂದು ಕಾಂಗ್ರೆಸ್ ನಡೆಸಿದ ಪ್ರತಿಭಟನೆ ವೇಳೆ ಬಸ್ಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
![](https://newsbites.in/wp-content/uploads/2024/08/img_20240819_1314102168363052575363360.jpg)
ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತ ಆರೋಪಿಗಳು. ಬಸ್ಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಮುಂಭಾಗದ ಗಾಜು ಒಡೆದು ಹೋಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.