ಪುರುಷರಕಟ್ಟೆ ಭೀಕರ ಅಪಘಾತ: ದ್ವಿಚಕ್ರ ವಾಹನ ಸವಾರ ಗಂಭೀರ
ಪುತ್ತೂರು: ಕಾರು-ಆಕ್ಟಿವಾ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆಪ್ಟೆಂಬರ್ 21 ರಂದು ರಾತ್ರಿ ನಡೆದಿದೆ.
ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಆಕ್ಟಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು ಗಂಭೀರ ಗಾಯವಾಗಿದೆ. ಗಂಭೀರ ಗಾಯಗೊಂಡಿರುವ ಆಕ್ಟಿವಾ ಸವಾರನನ್ನು ಬಂಟ್ವಾಳ ತಾಲ್ಲೂಕಿನ ಪಂಜಲ ನಿವಾಸಿ, ಹೋಳಿಗೆ ಲೈನ್ ಸೇಲ್ ಮಾಡುವ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಾಳು ಗಣೇಶರವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.