ಕರಾವಳಿ

ಮಂಗಳೂರು: ಹೆಲ್ಮೆಟ್ ನಿಂದ ಬಡಿದು ಬಸ್ಸಿನ ಗಾಜು ಒಡೆದು ಪರಾರಿಯಾದ ಸ್ಕೂಟರ್ ಸವಾರ!

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಡ್ಡ ಬಂದ ಸ್ಕೂಟರ್ ಸವಾರನನ್ನು ಬಸ್ ಚಾಲಕ ಪ್ರಶ್ನಿಸಿದ್ದಕ್ಕೆ ಕೋಪಗೊಂಡ ಸವಾರ, ಬಸ್ಸನ್ನು ಅಡ್ಡಗಟ್ಟಿ ಹೆಲ್ಮೆಟ್ ನಿಂದ ಬಸ್ಸಿನ ಮುಂಭಾಗದ ಗಾಜನ್ನು ಒಡೆದು ಪರಾರಿದ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಎಂಬಲ್ಲಿ ನಡೆದಿದೆ.

ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಕಂಕನಾಡಿ ಪೊಲೀಸರು ಬಸ್ ಚಾಲಕ ಅರುಣ್ ಅವರನ್ನು ವಿಚಾರಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಯಿತು. ಇನ್ನು ಬಸ್ ಚಾಲಕ ಅರುಣ್ ರವರ ದೂರಿನಂತೆ ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಮತ್ತು ಸಾರ್ವಜನಿಕ ಆಸ್ತಿ ಹಾನಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿ ಸ್ಕೂಟರ್ ಸವಾರನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!