ಕರಾವಳಿ

ಹೊಂಡಕ್ಕೆ ಬಿದ್ದ ಕಾರು

ಉಡುಪಿ: ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿ ಬಿದ್ದ ಘಟನೆ ಉಡುಪಿಯ ಅಂಬಲಪಾಡಿ ಜಂಕ್ಷನ್ ನಲ್ಲಿ ಡಿ.27ರಂದು ನಡೆದಿದೆ.


ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಕೇರಳ ನೋಂದಣಿ ಸಂಖ್ಯೆಯ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಪಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು ಈ ಹೊಂಡಕ್ಕೆ ಕಾರು ಮಗುಚಿ ಬಿದ್ದಿದೆ.

Leave a Reply

Your email address will not be published. Required fields are marked *

error: Content is protected !!