ಕರಾವಳಿಕ್ರೈಂ

ಉಳ್ಳಾಲ: ಲಾರಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ಸಮೀಪ ಡಿ.31ರ ತಡರಾತ್ರಿ ಸಂಭವಿಸಿದೆ.

ನಾಟೆಕಲ್ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಸ್ಕೂಟರ್ ಸವಾರ.

ಅಝರ್ ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮಂಗಳವಾರ ರಾತ್ರಿ ತಲಪಾಡಿಗೆ ಫುಡ್ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟ ಅಝರ್ ಅವರ ಮೇಲೆ ಲಾರಿಯ ಹಿಂಬದಿ ಚಕ್ರ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಅಝರ್ ಅವರ ಮೃತದೇಹವನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಕಾರಣವಾದ ಲಾರಿಯನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Leave a Reply

Your email address will not be published. Required fields are marked *

error: Content is protected !!