ಖಾಸಗಿ ಬಸ್-ಕಾರು ನಡುವೆ ಅಪಘಾತ, ಕಾರು ಚಾಲಕ ಗಂಭೀರ
ಬಂಟ್ವಾಳ: ಖಾಸಗಿ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿ ರೋಡಿನ ಸರ್ಕಲ್ ಬಳಿ ಇಂದು ನಡೆದಿದೆ. ವಿಶ್ವನಾಥ ಶೆಟ್ಟಿ ಗಂಭೀರವಾಗಿ ಗಾಯಗೊಂಡ ಕಾರು ಚಾಲಕ.

ಬಿಸಿರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ಕಾರಿಗೆ ಮೆಲ್ಕಾರ್-ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.