ಕಾರು-ರಿಕ್ಷಾ ಅಪಘಾತ, ರಿಕ್ಷಾ ಚಾಲಕ ಗಂಭೀರ
ಪುತ್ತೂರು: ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ಮಾ.14ರಂದು ನಡೆದಿದೆ.

ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬ೦ದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.