ರಾಜ್ಯ

ಶೃಂಗೇರಿ: ಭಾರೀ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಗಾಳಿ–ಮಳೆ ಅಬ್ಬರ ಮುಂದುವರೆದಿದ್ದು ಭಾರೀ ಗಾಳಿ-ಮಳೆ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ನಡೆದಿದೆ.ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಪರಿಣಾಮ ಶೃಂಗೇರಿ–ಮಂಗಳೂರು ಸಂಚಾರ ಸ್ಥಗಿತಗೊಂಡಿತ್ತು.





ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿಯದಂತೆ ರಸ್ತೆ ಬದಿಗೆ ಕಟ್ಟಿದ್ದ ಕಬ್ಬಿಣದ ತಡೆಗೋಡೆಗಳು ಕುಸಿದು ಬಿದ್ದಿದೆ. ವಾಹನ ಚಾಲಕರು ಬದಲಿ ಮಾರ್ಗವನ್ನು ಬಳಸಬೇಕಿತ್ತು. ಇದೀಗ ರಸ್ತೆಗೆ ಬಿದ್ದ ಮಣ್ಣನ್ನು ತೆರವು ಮಾಡಿದ್ದು ಸಂಚಾರಕ್ಕೆ ಮುಕ್ತಗೊಂಡಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!