ಕರಾವಳಿ

ಸುಳ್ಯ: ತಾಲೂಕು ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್: ಇಂದಿನಿಂದ ವಿತರಣೆ


ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ಬದಲಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ದೊರೆತಿದೆ.
ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ಡಾ.ಕರುಣಾಕರ ಕೆ.ವಿ. ಯವರು ಇಡ್ಲಿ, ಸಾಂಬಾರ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ರಝಾಕ್(ಪ್ರಗತಿ) ಚಂದ್ರನ್ ಕೂಟೇಲ್ ಮೊದಲಾದವರು ಉಪಸ್ಥಿತರಿದ್ದರು.


ಆಸ್ಪತ್ರೆಯಲ್ಲಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಬೆಳಗ್ಗಿನ ಉಪಹಾರವಾಗಿ ಬ್ರೆಡ್ ನೀಡಲಾಗುತ್ತಿತ್ತು. ಇದು ಸಾಕಾಗುವುದಿಲ್ಲ ಎಂದು ರೋಗಿಗಳು ಮನವಿ ಮಾಡಿಕೊಂಡಿದ್ದರು. ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆಯವರು ಕೂಡಾ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರಿಗೆ ಮನವಿ ಮಾಡಿ ಬೆಳಗ್ಗಿನ ಆಹಾರವಾಗಿ ಇಡ್ಲಿ, ಸಾಂಬಾರ್ ವಿತರಣೆಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದನೆ ನೀಡಿದ ಆರೋಗ್ಯ ಸಚಿವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಕ್ತ ಕ್ರಮಕ್ಕೆ ಸೂಚಿಸಿದ್ದರು. ಅದರಂತೆ‌ ಜು.11ರ ಬೆಳಗ್ಗಿನಿಂದ ಒಳ ರೋಗಿಗಳಿಗೆ ಇಡ್ಲಿ, ಸಾಂಬಾರ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!