ಕ್ರೈಂರಾಜ್ಯ

ಫೋಟೋ ತೆಗೆಯುವ ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ!



ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದ್ದು, ಫೋಟೂ ಶೂಟ್ ನೆಪದಲ್ಲಿ ಪತ್ನಿಯೇ ತನ್ನ ಪತಿಯನ್ನು ನದಿಗೆ ತಳ್ಳಿದ್ದಾಳೆ.  ರಾಯಚೂರಿನ ಶಕ್ತಿನಗರ ನಿವಾಸಿ ತಾತಪ್ಪ ನೀರಿಗೆ ಬಿದ್ದ ಪತಿಯಾಗಿದ್ದು, ಅವರ ಪತ್ನಿ ಗದ್ದೆಮ್ಮ ಅವರೇ ನೀರಿಗೆ ತಳ್ಳಿದ್ದಾರೆ. ನೀರಿಗೆ ಬಿದ್ದ ಕೂಡಲೇ ನದಿಯಲ್ಲಿ ಈಜಿ ಕಲ್ಲು ಬಂಡೆಯ ಮೇಲೆ ನಿಂತು ಕಾಪಾಡಿ ಅಂತ ಕೂಗಿಕೊಂಡಿದ್ದಾರೆ. ಈ ವೇಳೆ ಬ್ರಿಡ್ಜ್ ಕಂ ಬ್ಯಾರೇಜ್ ಮಾರ್ಗವಾಗಿ ಹೊರಟಿದ್ದ ಬುಲೆರೋ ವಾಹನದಲ್ಲಿದ್ದವರು ಹಾಗೂ ಕೆಬಿಜೆಎನ್‌ಎಲ್ ಸಿಬ್ಬಂದಿ, ಸ್ಥಳೀಯರು ನದಿಗೆ ಹಗ್ಗ ಎಸೆದು ತಾತಪ್ಪ ಅವರನ್ನು ರಕ್ಷಿಸಿದ್ದಾರೆ.





ನದಿಯಿಂದ ಮೇಲೆ ಬಂದ ಪತಿ ತನ್ನ ಪತ್ನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ ನಡೆದ ವಿಚಾರವನ್ನು ಫೋನ್‌ನಲ್ಲಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.



ಯಾದಗಿರಿಯ ವಡಗೆರಾ ತಾಲೂಕಿನ ಗದ್ದೆಮ್ಮ ಹಾಗೂ ತಾತಪ್ಪ ಕಳೆದ ಏ.10ರಂದು ಮದುವೆಯಾಗಿದ್ದರು. ಮದುವೆಯಾಗಿ ಮೂರು ತಿಂಗಳಲ್ಲೇ ಸಂಸಾರದಲ್ಲಿ ಬಿರುಕು ಮೂಡಿ, ಜಗಳವಾಡುತ್ತಿದ್ದರು. ಆ ಜಗಳವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಘಟನೆ ಕುರಿತು ಮಾತನಾಡಿರುವ ಪತಿ ತಾತಪ್ಪ, ‘ಪತ್ನಿಯನ್ನು ನಂಬಿ ಫೋಟೋ ತೆಗೆಸಿಕೊಳ್ಳಲು ನಿಂತಿದ್ದೆ. ಆದರೆ ಆಕೆ ನನ್ನನ್ನು ನದಿಗೆ ತಳ್ಳಿದ್ದಾಳೆ ಎಂದು ತಿಳಿಸಿದ್ದಾರೆ. ಆದರೆ ಪತ್ನಿ ಮಾತ್ರ ಈ ಆರೋಪ ಅಲ್ಲಗಳೆದಿದ್ದು, ನಾನು ಅವರನ್ನು ನದಿಗೆ ತಳ್ಳಿಲ್ಲ. ಅವರೇ ಕಾಲು ಜಾರಿ ನದಿಗೆ ಬಿದ್ದರು ಎಂದು ಹೇಳಿದ್ದಾರೆ. ಘಟನೆ ಬಳಿಕ ಒಟ್ಟಾಗಿಯೇ ಬೈಕ್‌ನಲ್ಲಿ ಪತಿ-ಪತ್ನಿ ಹೊರಟು ಹೋಗಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!