ಇಂದು ಎಸ್ವೈಎಸ್ ‘ಸೌಹಾರ್ದ ಸಂಚಾರ’ಕ್ಕೆ ಚಾಲನೆ
ಕರಾವಳಿ ಕರ್ನಾಟಕದಲ್ಲಿ ಕೋಮು ಸೌಹಾರ್ದವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಧೈಯ ವಾಕ್ಯದೊಂದಿಗೆ ಹಮ್ಮಿಕೊಂಡಿರುವ ‘ಸೌಹಾರ್ದ ಸಂಚಾರ’ಕ್ಕೆ ಜುಲೈ 14ರಂದು ಬೆಳಗ್ಗೆ 9ಗಂಟೆಗೆ ಕುಂದಾಪುರದಲ್ಲಿ ಚಾಲನೆ ನೀಡಲಾಗುವುದು.

ಸೈಯದ್ ಕೋಟೇಶ್ವರ ತಂಙಳ್ ಝಿಯಾರತ್ ಮೂಲಕ ಚಾಲನೆ ನೀಡಲಿದ್ದು, ಧರ್ಮಗುರು ರೆ.ಫಾ. ನೋವೆಲ್ ಬ್ರಹ್ಮಾವರ, ಪತ್ರಕರ್ತ ಶಶಿಧರ ಹೆಮ್ಮಾಡಿ ಭಾಗವಹಿಸುವರು. ಶಾಸ್ತ್ರೀ ಪಾರ್ಕ್ನಲ್ಲಿ ನಡೆಯುವ ಸಾರ್ವಜನಿಕ ಸಭೆಯನ್ನು ಕರ್ನಾಟಕ ವಕ್ಫ್ ಕೌನ್ಸಿಲ್ ಉಪಾಧ್ಯಕ್ಷ ಮೌಲಾನಾ ಶಾಫಿ ಸಅದಿ ಉದ್ಘಾಟಿಸುವರು. ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಉಡುಪಿ ನಗರದಲ್ಲಿ ಜಾಥಾ ಮತ್ತು ಸಾರ್ವಜನಿಕ ಸಭೆ ನಡೆಯಲಿದ್ದು ಅಪರಾಹ್ನ 3:30ಕ್ಕೆ ಕಾರ್ಕಳ ದಲ್ಲಿ ಸೌಹಾರ್ದ ಸಂಚಾರ ನಡೆಯಲಿದೆ.
ಸಂಜೆ 5:30ಕ್ಕೆ ಕಾಪುವಿನಲ್ಲಿ, ರಾತ್ರಿ 8ಕ್ಕೆ ಪಡುಬಿದ್ರೆಯಲ್ಲಿ ನಡೆಯಲಿದೆ.