ಕರಾವಳಿ

ಧರ್ಮಸ್ಥಳ ಪ್ರಕರಣ: ಜಯಂತ್ ಅವರಿಂದ ಧರ್ಮಸ್ಥಳ ಠಾಣೆಗೆ ದೂರು

ಬೆಳ್ತಂಗಡಿ: ಇಚಿಲಂಪಾಡಿ‌ ನಿವಾಸಿ ಜಯಂತ್ ಎಂಬವರು  ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು  ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ ಅಧಿಕಾರಿಗಳು, ದೂರನ್ನು ಸೂಕ್ತ ಕ್ರಮಕ್ಕಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡುವಂತೆ ತಿಳಿಸಿದ್ದಾರೆ.

ಅದರಂತೆ ಜಯಂತ್ ಅವರು ಆ.4ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ನೀಡಿದ ದೂರರ್ಜಿಯನ್ನು 200/DPS/2025ರಂತೆ ಸ್ವೀಕರಿಸಿಕೊಂಡಿದ್ದು, ಸದ್ರಿ ದೂರರ್ಜಿಯ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದುಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!