ಪುತ್ತೂರು: ನೇಣು ಬಿಗಿದು ಯುವತಿ ಆತ್ಮಹತ್ಯೆ
ಪುತ್ತೂರು: ಬನ್ನೂರು ಗ್ರಾಮದ ಕನಡ್ಕ ನಿವಾಸಿ, ಜಿಡೆಕಲ್ಲು ಕಾಲೇಜಿನ ಮಹಿಳಾ ಸಿಬ್ಬಂದಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17ರಂದ ನಡೆದಿದೆ.

ಬನ್ನೂರು ಗ್ರಾಮದ ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ(22ವ) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ತೇಜಸ್ವಿನಿ ಅವರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಂದೆ ಡೊಂಬಯ್ಯ ಕುಲಾಲ್, ತಾಯಿ ಭವಾನಿ, ಸಹೋದರ ಸ್ವಸ್ತಿಕ್ ಅವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.