ಕರಾವಳಿ

ಹಂಟ್ಯಾರ್‌ನಲ್ಲಿ ಎಸ್.ಡಿ.ಪಿ.ಐ ವತಿಯಿಂದ ನಿರ್ಮಿಸಿದ ಪ್ರಯಾಣಿಕರ ತಂಗುದಾಣ ಉದ್ಘಾಟನೆ

ಪುತ್ತೂರು: ಹಂಟ್ಯಾರ್ ಶಾಲಾ ಬಳಿ ಸಾರ್ವಜನಿಕರ ಹಲವಾರು ವರ್ಷದ ಬೇಡಿಕೆಯಾದ ಪ್ರಯಾಣಿಕರ ಬಸ್ಸು ತಂಗುದಾಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಟ್ಯಾರ್ ಬ್ರಾಂಚ್ ವತಿಯಿಂದ ನಿರ್ಮಿಸಿ ಉದ್ಘಾಟನೆ ಮಾಡಲಾಯಿತು. ಎಸ್.ಡಿ.ಪಿ.ಐ ಸಂಟ್ಯಾರ್ ಬ್ರಾಂಚ್ ಅಧ್ಯಕ್ಷ ಝಖರಿಯಾ ಸಂಟ್ಯಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬುರವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟನೆಗೈದರು. ನಂತರ ಮಾತನಾಡಿದ ಅವರು ಎಸ್.ಡಿ.ಪಿ.ಐ ಯಾವತ್ತೂ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಮುಂಚೂಣಿಯಲ್ಲಿದೆ, ಸರಕಾರಗಳು, ಇಲಾಖೆಗಳು ಜನರಿಗೆ ಬೇಕಾದ ಸೌಲಭ್ಯಗಳು ನೀಡದಂತಹ ಸಂದರ್ಭಗಳಲ್ಲಿ ಎಸ್.ಡಿ.ಪಿ.ಐ ಅದಕ್ಕಾಗಿ ಹೋರಾಟ ನಡೆಸುತ್ತದೆ ಅಲ್ಲಿಯೂ ನ್ಯಾಯ ದೊರಕದೆ ಇದ್ದಲ್ಲಿ ತಾವೇ ಆ ಸೌಲಭ್ಯಗಳನ್ನು ಜನರಿಗೆ ದೊರಕಿಸಿ ಕೊಡುವ ಮೂಲಕ ಪ್ರತಿಭಟನಾ ಶೈಲಿಯನ್ನೇ ಬದಲಾಯಿಸುತ್ತದೆ ಎಂದರು.

ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ಮಾತನಾಡಿ ಎಸ್.ಡಿ.ಪಿ.ಐ ಸಂಟ್ಯಾರ್ ಬ್ರಾಂಚ್ ಮೂಲಕ ಶ್ರಮದಾನ, ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ ಹೀಗೆ ಹಲವಾರು ಸಮಾಜಮುಖಿಯಾದ ಕೆಲಸ ಕಾರ್ಯಗಳನ್ನು ನಡೆಸುತ್ತಲೇ ಬಂದಿದೆ, ಇಂದು ಅದಕ್ಕೆ ಈ ತಂಗುದಾಣ ಸೇರಿದೆ, ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಎಸ್.ಡಿ.ಪಿ.ಐ ಸಂಟ್ಯಾರ್ ಬ್ರಾಂಚ್ ಪುತ್ತೂರು ತಾಲೂಕಿಗೆ ಮಾದರಿಯಾಗಿದೆ ಎಂದು ಹೇಳಿದರು.ಹಂಟ್ಯಾರು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಬಾಬು ಮರಿಕೆ ಮಾತನಾಡಿದರು. ಎಸ್.ಡಿ.ಪಿ.ಐ ಕುಂಬ್ರ ಬ್ಲಾಕ್ ಅಧ್ಯಕ್ಷ ರಿಯಾಝ್ ಬಳಕ್ಕ ಪ್ರಸ್ತಾವಿಕ ಮಾತುಗಳನ್ನಾಡಿದರು. ಸಂಟ್ಯಾರ್ ಬದ್ರಿಯಾ ಜುಮಾ ಮಸೀದಿಯ ಕಾರ್ಯದರ್ಶಿ ಹಮೀದ್ ಕಲ್ಲರ್ಪೆ, ಉದ್ಯಮಿ ಸಿ.ಎಂ ಇಬ್ರಾಹಿಂ ಮುಸ್ಲಿಯಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಉಸ್ಮಾನ್ ಎ.ಕೆ, ಆರ್ಯಾಪು ಗ್ರಾಮ ಸಮಿತಿ ಅಧ್ಯಕ್ಷ ಬಶೀರ್ ವಾಗ್ಲೆ, ಕಾರ್ಯದರ್ಶಿ ಮಸೂದ್ ಸಂಟ್ಯಾರ್, ಮಾಯ್ ದೆ ದೇವುಸ್ ಚರ್ಚ್ ಸಂಟ್ಯಾರ್ ವಾರ್ಡ್ ಮಾಜಿ ಗುರಿಕ್ಕಾರರಾದ ಸುನಿಲ್ ಡಿಸೋಝ, ಆರ್ಯಾಪು ಗ್ರಾ.ಪಂ ಸದಸ್ಯರಾದ ನಾಗೇಶ್ ಕುರಿಯ, ರಶೀದಾ ಕಲ್ಲರ್ಪೆ, ಒಳಮೊಗ್ರು ಗ್ರಾ.ಪಂ ಸದಸ್ಯ ಸಿರಾಜ್ ಪರ್ಪುಂಜ, ಬದ್ರಿಯಾ ಗಲ್ಫ್ ಫ್ರೆಂಡ್ಸ್ ಸಂಟ್ಯಾರ್ ಇದರ ಉಪಾಧ್ಯಕ್ಷ ಬಶೀರ್ ಮರಿಕೆ, ಉದ್ಯಮಿ ಮಹಮ್ಮದ್ ಕಲ್ಲರ್ಪೆ ಉಪಸ್ಥಿತರಿದ್ದರು. ಎಸ್.ಡಿ.ಪಿ.ಐ ಸಂಟ್ಯಾರ್ ಬ್ರಾಂಚ್ ಕಾರ್ಯದರ್ಶಿ ಶಾಫಿ ಮರಿಕೆ ಸ್ವಾಗತಿಸಿದರು. ಸಮದ್ ಝೆನಿತ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!