ಕರಾವಳಿಕ್ರೈಂ

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಆರೋಪಿ, ಸಂತ್ರಸ್ತೆ, ಮಗುವಿನ ಡಿಎನ್‌ಎ ಪರೀಕ್ಷೆ

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಆರೋಪಿ, ಸಂತ್ರಸ್ತೆ ಹಾಗೂ ಆಕೆಯ ಮಗುವಿನ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.



ಪ್ರಕರಣದ ಆರೋಪಿಯಾಗಿ ಬಂಧಿಸಲ್ಪಟ್ಟು ನ್ಯಾಯಾಂಗ ಬಂಧನದಲ್ಲಿರುವ ಶ್ರೀಕೃಷ್ಣಜೆ.ರಾವ್‌ನನ್ನು ಆ.19ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯದ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ರಕ್ತ ಸಂಗ್ರಹಣೆ ಮಾಡಲಾಯಿತು. ಸರಕಾರಿ ಆಸ್ಪತ್ರೆಯ ವೈದ್ಯರ ನೇತೃತ್ವದಲ್ಲಿ ಆರೋಪಿ ಶ್ರೀಕೃಷ್ಣ ಜೆ.ರಾವ್, ಸಂತ್ರಸ್ತ ಯುವತಿ ಹಾಗೂ ಆಕೆಯ ಮಗುವಿನ ರಕ್ತದ ಮಾದರಿಯನ್ನು ನ್ಯಾಯಾಧೀಶರ ಸಮಕ್ಷಮದಲ್ಲಿ ಸಂಗ್ರಹಿಸಲಾಗಿದೆ. ಮೂವರ ರಕ್ತವನ್ನೂ ಸಂಗ್ರಹಿಸಿ ಮುಂದಿನ ತನಿಖೆಗಾಗಿ ಬೆಂಗಳೂರು ಎಫ್‌ಎಸ್‌ಎಲ್‌ಗೆ ಕಳುಹಿಸಿಕೊಡಲಾಗಿದೆ.

Leave a Reply

Your email address will not be published. Required fields are marked *

error: Content is protected !!