ಕರಾವಳಿಕ್ರೈಂ

ಖೋಟಾನೋಟು ಪ್ರಕರಣ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಉಪ್ಪಿನಂಗಡಿಯಲ್ಲಿ ಬಂಧನ

ಮಂಗಳೂರು: ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಆ. 25ರಂದು ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳದ ಬಿ.ಸಿ ರೋಡ್, ಜೋಡು ಮಾರ್ಗ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಬಂಧಿತ ಆರೋಪಿ. 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಭಾ.ದಂ.ಸಂ. ರಂತೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಮಧ್ಯೆ ಆರೋಪಿಯು ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದ ಬಳಿಕ, ಪ್ರಕರಣದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ.


ನ್ಯಾಯಾಲಯವು ಈತನ ಮೇಲೆ 8 ಬಾರಿ ಬಂಧನ ವಾರಂಟ್ ಹೊರಡಿಸಿದ್ದರೂ ತಲೆಮರೆಸಿಕೊಂಡಿದ್ದ ಈತನನ್ನು, ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ವಾರಂಟ್ ಜಾರಿ ಸಿಬ್ಬಂದಿಗಳು ಆ. 25ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!