ರಾಷ್ಟ್ರೀಯ

ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.


ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ಈ ಮೂಲಕ 17ನೇ ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿಯಾಗಿದ್ದ  ಇಂಡಿಯಾ ಅಭ್ಯರ್ಥಿ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಪರಾಭವಗೊಂಡರು.



ಸಂಸತ್ತಿನಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸೇರಿದಂತೆ ಒಟ್ಟು 788 ಸಂಸದರಿದ್ದಾರೆ. ಎರಡೂ ಸದನಗಳಲ್ಲಿ 7 ಸ್ಥಾನಗಳು ಖಾಲಿ ಇರುವ ಕಾರಣ ಒಟ್ಟು 781 ಸಂಸದರು ಮತ ಚಲಾಯಿಸಬೇಕಾಗಿತ್ತು. ಆದ್ರೆ ಇದರಲ್ಲಿ ಬಿಆರ್‌ಎಸ್‌ನ 4, ಬಿಜೆಡಿಯ 7, ಅಕಾಲಿ ದಳದ 1 ಮತ್ತು 1 ಸ್ವತಂತ್ರ ಸಂಸದರು ಮತದಾನದಿಂದ ದೂರ ಉಳಿದಿದ್ದರು. ಹೀಗಾಗಿ ಒಟ್ಟು 768 ಸಂಸದರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.

Leave a Reply

Your email address will not be published. Required fields are marked *

error: Content is protected !!