ಅಶೋಕ ಜನಮನ…ಎಲ್ಲೆಲ್ಲೂ ಜನವೋ ಜನ…
ಪುತ್ತೂರು: ಶಾಸಕ ಅಶೋಕ್ ಕುಮಾರ್ ನೇತೃತ್ವದಲ್ಲಿ ಅಶೋಕ ಜನಮನ ಕಾರ್ಯಕ್ರಮ ಕೊಂಬೆಟ್ಟು ಮೈದಾನದಲ್ಲಿ ನಡೆಯುತ್ತಿದ್ದು ಜನ ಸಾಗರವೇ ಹರಿದು ಬರುತ್ತಿದೆ.

ಜನರಿಂದ ಮೈದಾನ ತುಂಬಿ ತುಳುಕಿದ್ದು ಎಲ್ಲೆಲ್ಲೋ ಜನವೋ ಜನ ಎಂಬಂತಿದೆ. ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ವಯಂ ಸೇವಕರು ಶಿಸ್ತು ಬದ್ದವಾಗಿ ಎಲ್ಲವನ್ನೂ ನಿಯಂತ್ರಿಸುತ್ತಿದ್ದಾರೆ. ಈ ಬಾರಿ ನಿರೀಕ್ಷೆಗೂ ಮೀರಿ ಜನ ಬರುವ ಸಾಧ್ಯತೆಯಿದ್ದು ಅದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.





