ಕರಾವಳಿಕ್ರೈಂ

ಪುತ್ತೂರು: ಅಂತರ್ ರಾಜ್ಯ ಮಾದಕವಸ್ತು ಮಾರಾಟ ಜಾಲದ ಆರೋಪಿಗಳು ವಶಕ್ಕೆ


ಪುತ್ತೂರು: ಫೆ.18ರಂದು ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ  ಅಕ್ರಮವಾಗಿ MDMA ಮಾದಕವಸ್ತು  ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ತಡೆದು ಪರಿಶೀಲಿಸಿದಾಗ ಮೂವರು ಯುವಕರು ವಾಹನದಲ್ಲಿ ಮಾರಾಕಾಯುಧವಾದ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತು ಪತ್ತೆಯಾಗಿದೆ. ಅಲ್ಲದೇ ಆರೋಪಿಗಳಾದ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು  (30) ಕೋಝಿಕೋಡ್, ಕೇರಳ,
ಇಸ್ಮಾಯಿಲ್‌ (28) ವಯನಾಡ್‌ ಜಿಲ್ಲೆ, ಕೇರಳ ಹಾಗೂ
ಸಂಶೀರ್‌ (27)ಕೊಝಿಕೋಡ್‌, ಕೇರಳ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.



ಬಂಧಿತ ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್‍ಗಳು ಹಾಗೂ ನಗದು ರೂ. 10,000/- ವಶಪಡಿಸಿಕೊಂಡು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ  25/2026 ಕಲಂ 8C, 22(C), 29 NDPS Act 1985 & ಕಲಂ: 25(1B)(B) Arms Act ನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಆರೋಪಿಗಳು ಕೇರಳ,ಗೋವಾ ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್‍ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿ, ತಲೆಮರೆಸಿಕೊಂಡಿರುವುದಾಗಿದೆ. ಅಲ್ಲದೆ ಮುಹಮ್ಮದ್‌ ಅಜ್ಮಲ್‌ ಸಿ @ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅ.ಕ್ರ: 04/2026 ಕಲಂ 8C, 21(b),NDPS Act 1985 ರ ಪ್ರಕರಣದ ಆರೋಪಿಯಾಗಿರುತ್ತಾನೆ. ಅಜ್ಮಲ್‍ ಸಹಚರನಾದ ಇಸ್ಮಾಯಿಲ್‌ನ ಮೇಲೆ ಕೂಡ ಕೇರಳ ರಾಜ್ಯದ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿದೆ.


ಸದ್ರಿ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್‍ ಕುಮಾರ್‍, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಸುನಿಲ್‍ ಕುಮಾರ್, ದ.ಕ ಜಿಲ್ಲಾ ಡಿ.ಎಸ್‍.ಬಿ ವಿಭಾಗದ ಪೊಲೀಸ್‍ ನಿರೀಕ್ಷಕರಾದ ನಂದ ಕುಮಾರ್‍, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ  ಗುಣಪಾಲ ಹಾಗೂ  ಸುಶ್ಮಾ ಜೆ ಭಂಡಾರಿ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್‍ ರೈ, ಪ್ರಶಾಂತ್‍ ಎಂ, ಪ್ರವೀಣ್‍ ರೈ, ಹರ್ಷಿತ್‍, ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಪರಮೇಶ್ವರ ಗೌಡ, ಹರೀಶ್‍, ಸುಬ್ರಹ್ಮಣ್ಯ, ಬೀಮಸೇನ್‍,  ಭವಿತ್ ರೈ, ನಾಗಾರಾಜ್‍, ಕಾರ್ತಿಕ್‍ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್‍, ಸಂಪತ್‍ ಮತ್ತು ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಿದ್ದರು.

Leave a Reply

Your email address will not be published. Required fields are marked *

error: Content is protected !!