ಮಂಗಳೂರು: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ
ಮಂಗಳೂರು: 2021 ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೂಳೂರು ರಾಯಿಕಟ್ಟೆ ನಿವಾಸಿ ವಿಜಯ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ ಪ್ರಕರಣಗಳು, ದರೋಡೆಗೆ ಸಂಚು ಪ್ರಕರಣಗಳು ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2021 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಮಂಗಳೂರು ನಗರದ ಕಾವೂರು ಮತ್ತು ಉರ್ವ ಪೊಲೀಸ್ ರಾಣೆ, ಪಣಂಬೂರು, ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.




