ಮೂಡಂಬೈಲು ಡಾ| ರವಿ ಶೆಟ್ಟಿ ಕಯ್ಯಾರ ಪ್ರಶಸ್ತಿಗೆ ಆಯ್ಕೆ
ಪುತ್ತೂರು: ಎಟಿಎಸ್ ಕತಾರ್ ಆಡಳಿತ ನಿರ್ದೇಶಕ ಮೂಡಂಬೈಲು ಡಾ| ರವಿ ಶೆಟ್ಟಿ ಅವರು ಕಯ್ಯಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನಮಂಗಳೂರು ಸಹಯೋಗದಲ್ಲಿ ಜೂ.21ರಂದು ಕಯ್ಯಾರು ಕಾಮಿಲ್ ಕೊಕ್ಕೆಚಾಲು ಶಾಲಾ ವಠಾರದಲ್ಲಿ ನಡೆಯುವ ನಾಡೋಜ ಡಾ। ಕಯ್ಯಾರ ಕಿಂಞಣ್ಣರೈ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.




