ವಯಾನಾಡು ಭೀಕರ ಭೂಕುಸಿತ: ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ
ವಯನಾಡು: ಕೇರಳದ ವಯಾನಾಡಿನಲ್ಲಿ ಸಂಭವಿಸಿದ ಭೂಕುಸಿತದ ದುರಂತ ಸ್ಥಳದಿಂದ ಗುರುವಾರ ಮೂರು ಶವವನ್ನು ಹೊರತೆಗೆಯಲಾಗಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಶೋಧ ಕಾರ್ಯಾಚರಣೆಯ ವಲಯ 1ರಲ್ಲಿ ಒಂದು ಶವ ಪತ್ತೆಯಾಗಿದೆ. ಮತ್ತೊಂದು ಶವ ದುರಂತ ಸ್ಥಳದ ಸಮೀಪ ಹರಿಯುವ ನದಿಯಲ್ಲಿ ಪತ್ತೆಯಾಗಿದೆ. ಸದ್ಯ ವಲಯ 1 ಮತ್ತು 2ರಲ್ಲಿ ಹಾಗೂ ನದಿಯ ಆಸುಪಾಸಿನಲ್ಲಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ.




