ಸುರತ್ಕಲ್’ನ ಅಕ್ರಮ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಮುಂದುವರಿದ ಧರಣಿ ಸತ್ಯಾಗ್ರಹ: ಶಕುಂತಳಾ ಶೆಟ್ಟಿ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಭಾಗಿ
ಸುರತ್ಕಲ್ ನ ಅಕ್ರಮ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿ ಮುಂದುವರಿದಿದೆ.
ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಶಕುಂತಳಾ ಟಿ ಶೆಟ್ಟಿ ಹಾಗೂ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ ಬಿ, ಕೆಪಿಸಿಸಿ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ದ.ಕ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ, ದ.ಕ ಜಿಲ್ಲಾ ಕಾರ್ಯದರ್ಶಿ ಮುರಳಿಧರ ರೈ ಹಾಗೂ ಹಲವು ಮುಖಂಡರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.