ಜಿಲ್ಲೆ

ಬೆಳ್ತಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶ- ಒರ್ವ ಮೃತ್ಯು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಭಾರತೀಯ ಮಜ್ದೂರ್ ಸಂಘದ ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದ ಬ್ಯಾನರ್ ಅನ್ನು ಅಳವಡಿಸುತ್ತಿದ್ದ ವೇಳೆ ಅನಾಹುತ ಸಂಭವಿಸಿದೆ.

ಖಾಸಗಿ ಪ್ರಿಂಟರ್ಸ್ ನವರು ಬ್ಯಾನರ್ ಸಿದ್ಧಪಡಿಸಿ ಅಳವಡಿಸುತ್ತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ಲೈನಿಗೆ ತಾಗಿದ್ದು, ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಓರ್ವ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

Leave a Reply

Your email address will not be published. Required fields are marked *

error: Content is protected !!