ಕ್ರೈಂಜಿಲ್ಲೆ

ಬೆಳ್ತಂಗಡಿ: ರಿಕ್ಷಾ, ಬೈಕ್ ನಡುವೆ ಅಪಘಾತದಲ್ಲಿ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಂಭವಿಸಿದೆ.

ಮೃತಪಟ್ಟ ವಿದ್ಯಾರ್ಥಿ ಶಿವಪ್ರಸಾದ್

ಮೃತ ವ್ಯಕ್ತಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿ  ಪಾರಂಕಿ ಗ್ರಾಮದ ನಿವಾಸಿ ವಸಂತ ನಾಯಕ್ ಎಂಬವರ ಪುತ್ರ ಶಿವಪ್ರಸಾದ್ (19)ಎಂಬವರಾಗಿದ್ದಾರೆ

ಪಾರಂಕಿ ರಸ್ತೆಯ ನಡಿಬೆಟ್ಟು ಎಂಬಲ್ಲಿ ಅಟೋ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತ ಸಂಭವಿಸಿದೆ.ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿಯ ವೇಳೆ ಅವರು ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!