ಕರಾವಳಿ

ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲವೆಂದು ಸಂಘ ಪರಿವಾರದಿಂದ ಬ್ಯಾನರ್ ಅಳವಡಿಕೆ -ಪೊಲೀಸರಿಂದ ತೆರವು

ಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶವಿಲ್ಲ ಎಂದು ಸಂಘಪರಿವಾರ ಹಾಕಿದ್ದ ಬ್ಯಾನರನ್ನುಪೊಲೀಸರು ತೆರವುಗೊಳಿಸಿದ್ದಾರೆ.

ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ಸಂಘ ಪರಿವಾರ ಸಂಘಟನೆ ಬ್ಯಾನರ್ ಹಾಕಿದ್ದು  ವಿಗ್ರಹಾರಾಧನೆ ಹರಾಂ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಎಂದು ಬರೆದು ಬ್ಯಾನರ್ ಅಳವಡಿಸಲಾಗಿತ್ತು.

 ವಿವಾದಾತ್ಮಕ ಬ್ಯಾನರ್ ಬಗ್ಗೆ ಪೊಲೀಸರ ಗಮನಕ್ಕೆ ಬರುತ್ತಿದ್ದಂತೆ ಅದನ್ನು ತೆರವುಗೊಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!