ಕರಾವಳಿ

ಸುಳ್ಯ: ಮೊಗರ್ಪಣೆ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದಲ್ಲಿ ಗಣರಾಜ್ಯೋತ್ಸವ



ಸುಳ್ಯ ಮೊಗರ್ಪಣೆ ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದಲ್ಲಿ ಹಿದಾಯತುಲ್ ಇಸ್ಲಾಂ ಜಮಾತ್ ಕಮಿಟಿಯ ಆಶ್ರಯದಲ್ಲಿ ಇಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.


ಜಮಹತ್ ಕಮಿಟಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸೀ ಫುಡ್ ಧ್ವಜಾರೋಹಣ ನೆರವೇರಿಸಿದರು.
ಸ್ಥಳೀಯ ಮುದರ್ರಿಸ್ ಹಾಫಿಲ್ ಸೌಕತ್ ಅಲಿ ಸಖಾಫಿ ಪ್ರಾರ್ಥನೆ ನೆರವೇರಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮದರಸ ಸದರ್ ಮುಅಲ್ಲಿಂ ಮಹಮ್ಮದ್ ಸಖಾಫಿ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶ ಭಾಷಣವನ್ನು ಮಾಡಿದರು.


ಜಮಾಅತ್ ಕಮಿಟಿ ಉಪಾಧ್ಯಕ್ಷ ಎಚ್ಎ ಉಮ್ಮರ್ ಹಾಜಿ ಮಾತನಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಸಮಿತಿ ಉಪಾಧ್ಯಕ್ಷ ಸಿ ಎಮ್ ಉಸ್ಮಾನ್ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಎಸ್ ವೈ, ಹಾಗೂ ಸದಸ್ಯರು, ಮದರಸ ಅಧ್ಯಾಪಕವೃಂದದವರು, ವಿದ್ಯಾರ್ಥಿಗಳು ಪೋಷಕ ವೃಂದದವರು ಉಪಸ್ಥಿತರಿದ್ದರು.
ಎಸ್ ಬಿ ಎಸ್ ಸಮಿತಿ ಕಾರ್ಯದರ್ಶಿ ಮೊಹಮ್ಮದ್ ಶಫೀಕ್ ಸ್ವಾಗತಿಸಿ, ಸಮಿತಿ ಸದಸ್ಯ ನಾಶೂಕ್ ಪ್ರತಿಜ್ಞಾವಿಧಿ ಬೋಧನೆಯನ್ನು ಬೋಧಿಸಿದರು.
ಮಹಮ್ಮದ್ ಸಖಾಫಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!