ಕರಾವಳಿ

ಬೆಳ್ತಂಗಡಿ: ಸೇತುವೆಗೆ ಡಿಕ್ಕಿ ಹೊಡೆದು ಆಟೋ ರಿಕ್ಷಾ ಪಲ್ಟಿ: ಮಗು ಸಾವು

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬನಂತಾಡಿ ಸಮೀಪ ಆಟೋ ರಿಕ್ಷಾವೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ಮಾಲಾಡಿಯಲ್ಲಿ ನಡೆದಿದೆ.



ಆಟೋ ರಿಕ್ಷಾ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿಯಾದ ಸಂತೋಷ್ ಮತ್ತು ಗೀತಾ ದಂಪತಿಗಳ ಒಂದು ವರ್ಷ ಗಂಡು ಮಗು ಅತರ್ವ ಸಾವನ್ನಪ್ಪಿದ್ದು ರಿಕ್ಷಾದಲ್ಲಿದ್ದ ಇತರರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.



ಸಾವನ್ನಪ್ಪಿದ ಮಗುವಿನ ತಾಯಿ ಗೀತಾ ತನ್ನ ತಾಯಿ ಮನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿಯಾಗಿದ್ದು, ಜ.30 ರಂದು ಗೀತಾ ಅವರ ತಂಗಿ ಮನೆಯಾದ ಶಂಬೂರು ಎಂಬಲ್ಲಿಗೆ ಹೋಗಿ ವಾಪಾಸ್ ತಾಯಿ ರತ್ನಾ ಜೊತೆ ಗೀತಾ ಮತ್ತು ಮಗು ಜೊತೆ ತಾಯಿ ರತ್ನಾ ಮನೆಗೆ ಶಂಬೂರಿನ ದಯಾನಂದ ಎಂಬವರ ಆಟೋ ರಿಕ್ಷಾದಲ್ಲಿ ಬರುತ್ತಿದ್ದಾಗ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮಗು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣ ಮಂಗಳೂರು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಮಗು ಸಾವನ್ನಪ್ಪಿದೆ.

ಆಟೋ ಚಾಲಕನ ನಿರ್ಲಕ್ಷ್ಯತನದ ಚಾಲನೆಯಿಂದ ಮಗು ಸಾವಿಗೆ ಕಾರಣವಾಗಿರುವ ಬಗ್ಗೆ ಆಟೋ ಚಾಲಕ ಶಂಬೂರಿನ ದಯಾನಂದ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!