ಕರಾವಳಿ

ಲಾರಿ-ಬೈಕ್ ಮಧ್ಯೆ ಭೀಕರ ಅಪಘಾತ- ರೆಂಜಲಾಡಿಯ ಯುವಕನಿಗೆ ಗಂಭೀರ ಗಾಯ

ಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಹುಣಸೂರು ಬಳಿ ಫೆ.೪ರಂದು ಬೆಳಿಗ್ಗೆ ನಡೆದಿದೆ.

ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಸಾಬಿತ್ ಎಂಬವರು ತನ್ನ ಎಫ್‌ಝಡ್ ಬೈಕ್ ಮೂಲಕ ಬೆಳಗ್ಗಿನ ಜಾವ ಬೆಂಗಳೂರಿಗೆ ತೆರಳಿದ್ದು ಹುಣಸೂರು ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. 

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸಾಬಿತ್ ರಸ್ತೆಗೆ ಎಸೆಯಲ್ಪಟ್ಟಿದ್ದು ಡಿಕ್ಕಿಯ ರಭಸಕ್ಕೆ ಸಾಬಿತ್ ಅವರ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಸಾಬಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!