ಕ್ರೈಂರಾಜ್ಯ

ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನ ಬರ್ಬರವಾಗಿ ಕೊಲೆ

ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಪಿಳ್ಳಣ್ಣ ಗಾರ್ಡನ್ನಲ್ಲಿ ವರದಿಯಾಗಿದೆ. ಸತೀಶ್(23. ವ) ಕೊಲೆಯಾದವರು. ಎ.2ರಂದು ತಡರಾತ್ರಿ ದುಷ್ಕರ್ಮಿಗಳು ದೊಣ್ಣೆಯಿಂದ ಸತೀಶ್ ಅವರ ತೆಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ನಂತರ ರೈಲ್ವೆ ಟ್ರ್ಯಾಕ್ ಬಳಿ ಇರುವ ಖಾಲಿ ಜಾಗದಲ್ಲಿ ಮೃತದೇಹ ಬಿಸಾಡಿ ಪರಾರಿಯಾಗಿದ್ದಾರೆ. ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave a Reply

Your email address will not be published. Required fields are marked *

error: Content is protected !!