ಮಡಿಕೇರಿ: ಎಎಪಿ ಅಧಿಕೃತ ಅಭ್ಯರ್ಥಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಮಡಿಕೇರಿ ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಧಿಕೃತ ಅಭ್ಯರ್ಥಿ ಟಿ.ಕೆ ಸಾಯಿಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪರವರ ಸಮ್ಮುಖದಲ್ಲಿ ಸಿದ್ದಾಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ .
ಈ ಸಂದರ್ಭವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಹಾಗೂ ವಿವಿಧ ಮುಖಂಡರುಗಳು ಉಪಸ್ಥಿತರಿದ್ದರು.