ನೈತಿಕ ಪೊಲೀಸ್’ಗಿರಿಗೆ ರಾಜ್ಯದಲ್ಲಿ ಅವಕಾಶವಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಮುಂದಕ್ಕೆ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ, ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕಟ್ಟುನಿಟ್ಟಾಗಿ ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜನಸ್ನೇಹಿ ಆಡಳಿತ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ದೂರು ನೀಡಲು ಬರುವವರ ಜತೆ ಸ್ನೇಹದಿಂದ ವರ್ತಿಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆ ನಡೆದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರು ಎಂದು ಎಚ್ಚರಿಕೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿ ಕಾಪಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಆ ಧರ್ಮ ಈ ಧರ್ಮ ಎನ್ನುವ ಧರ್ಮದ ವಿಚಾರ ಬರಬಾರದು. ಎಲ್ಲರನ್ನು ಸಮಾನವಾಗಿ ಕಾಣುವಂತೆ ಪೊಲೀಸರಿಗೆ ಸೂಚಿಸಿದ್ದೇವೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ .