ಕ್ರೈಂರಾಜ್ಯ

ಭೀಕರ ರಸ್ತೆ ಅಪಘಾತ: ಐದು ಮಂದಿ ಸ್ಥಳದಲ್ಲೇ ಸಾವು; 13 ಮಂದಿಗೆ ಗಾಯ

ನಿಂತಿದ್ದ ಲಾರಿಗೆ ಕ್ರೂಷರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸಹಿತ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೂ.6ರಂದು ಮುಂಜಾನೆ ವರದಿಯಾಗಿದೆ.

ಮೃತರನ್ನು ಆಂದ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರ ತಾಲೂಕಿನ ವೆಲ್ಲಗೂಡು ಗ್ರಾಮದ ಮುನೀರ್(40), ನಯಾಮತ್ (40), ಮುದ್ದತ್ ಶಿರ್ ( 12), ರಮಿಜಾ ಬೇಗಂ (50), ಸುಮ್ಮಿ (12) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ರೂಷರ್ನಲ್ಲಿದ್ದವರು ಕಲಬುರಗಿ ಜಿಲ್ಲೆಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಗೆ ತೆರಳುತ್ತಿದ್ದರೆನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!