ಇನ್ನೂ ಪ್ರತಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿ..!
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ತಿಂಗಳು ಸಮೀಪಿಸಿದೆ. ಆದರೆ ಬಿಜೆಪಿಯು ರಾಜ್ಯದಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನನ್ನು, (ಪ್ರತಿಪಕ್ಷದ ನಾಯಕನನ್ನು) ಇದುವರೆಗೂ ಆಯ್ಕೆ ಮಾಡಿಲ್ಲ. ಈ ವಿಚಾರವಾಗಿ ದೆಹಲಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮುಂದಿನ ಮೂರು ದಿನಗಳಲ್ಲಿ ಪಕ್ಷವು ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಿದೆ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ
ಈಗಾಗಲೇ ವಿರೋಧ ಪಕ್ಷದ ನಾಯಕನನ್ನು ನೇಮಿಸಿ ಆಗಬೇಕಿತ್ತು. ಆದರೆ ನಮ್ಮ ನಾಯಕರು ಒಡಿಶಾ ರೈಲು ಅಪಘಾತದ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.