ಸದನಕ್ಕೆ ಅಗೌರವ ತೋರಿದ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್
ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ್ದಾರೆ.

ಆರ್.ಅಶೋಕ್, ಆರಗ ಜ್ಞಾನೇಂದ್ರ, ವಿ.ಸುನಿಲ್ ಕುಮಾರ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್ ಅವರು ಅಮಾನತಾದವರು.
ಸದನದ ಬಾವಿಗಿಳಿದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಚೂರು ಮಾಡಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿದ್ದರು.