ಕರಾವಳಿ

ಕಳಂಜದ ಮಸೂದ್ ಕೊಲೆ ಪ್ರಕರಣ: ಓರ್ವ ಆರೋಪಿಗೆ ಷರತ್ತು ಬದ್ಧ ಜಾಮೀನು



ಸುಳ್ಯ: ಕಳಂಜದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ. ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

ಕೊಲೆಯಾದ ಮಸೂದ್

2022 ಜು.19 ರಂದು ಕಳಂಜದಲ್ಲಿ 8 ಮಂದಿ ದುಷ್ಕರ್ಮಿಗಳ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ‌ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಪ್ರಕರಣದ 8 ಆರೋಪಿಯಾಗಿರುವ ಭಾಸ್ಕರ ಕೆ.ಎಂ. ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದು ಆ.3 ರಂದು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!