Author: news_bites_admin

ಜಿಲ್ಲೆ

ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಸಾವು

ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಸುಶೀಲ(6.ವ) ಸಾವನ್ನಪ್ಪಿದ್ದಾಳೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಸೋಲಿಗರ ಹಾಡಿಯಲ್ಲಿ ಬಾಲಕಿ ಮನೆಯಿಂದ ಹೊರಬಂದಿದ್ದ ವೇಳೆ ಚಿರತೆ ದಾಳಿ ಮಾಡಿ

Read More
ಕರಾವಳಿರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ಸಭೆಯಲ್ಲಿ ಬಣಗಳ ಮಧ್ಯೆ ಮಾತಿನ ಚಕಮಕಿ: ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಾಮಾಜಿಕ ಜಾಲ ತಾಣದಲ್ಲಿ ಆಗ್ರಹ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳ ಕುರಿತು ಪರಾಮರ್ಶೆ ಸಭೆ ಜು.14ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದ್ದು ಸಭೆಯಲ್ಲಿ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ರಕ್ಷಿತ್ ಶಿವರಾಮ್ ಬಣ ಮತ್ತು ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ. ಸತ್ಯ ಶೋಧನಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಸಭೆ ನಡೆಸುತ್ತಿದ್ದ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ, ಶೈಲೇಶ್ ಕುಮಾರ್, ಕೇಶವ್ ಪಿ, ಹರೀಶ್ ಕುಮಾರ್, ಮ್ಯಾಥ್ಯೂ, ರಾಜಶೇಖರ್ ಮತ್ತಿತರರು ಸಭೆಯಲ್ಲಿದ್ದರು. ಈ ವೇಳೆ ಎರಡು ಬಣಗಳ ಮಧ್ಯೆ ಮಾತಿನ ಚಕಮಕಿ ನಡೆದು ಪರಸ್ಪರ ವಾಗ್ವಾದ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದರು.  ಸುಳ್ಯ ಹಾಗೂ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಗುಂಪುಗಾರಿಕೆ ಜೋರಾಗಿ ನಡೆಯುತ್ತಿದ್ದು ಸದ್ಯಕ್ಕೆ ನಿಲ್ಲುವ ಲಕ್ಷಣ ಗೋಚರಿಸುತ್ತಿಲ್ಲ. ಈತನ್ಮಧ್ಯೆ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರನ್ನು ಬದಲಾಯಿಸಬೇಕೆಂದು ಸಾಮಾಜಿಕ ಜಾಲ ತಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಭಿನ್ನಮತ ಶಮನಗೊಳಿಸುವಲ್ಲಿ ವಿಫಲವಾಗಿರುವ ಜಿಲ್ಲಾಧ್ಯಕ್ಷರು ಪಕ್ಷ ಸಂಘಟಿಸುವಲ್ಲಿ ವಿಫಲರಾಗಿದ್ದಾರೆ, ಅಲ್ಲದೇ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ, ಹಾಗಿರುವಾಗ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವುದೇ ಸೂಕ್ತ ಎಂದು ಹಲವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Read More
ರಾಜ್ಯ

ಗೃಹ ಲಕ್ಷ್ಮೀ ಯೋಜನೆ ನೋಂದಣಿಗೆ ದಿನಾಂಕ ಪ್ರಕಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ ಎಂದು ಮಹಿಳಾ

Read More
ಜಿಲ್ಲೆ

ಚಿರತೆ ಹಿಡಿದು ಬೈಕಿನಲ್ಲಿ ಸಾಗಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾಹಸಿ ಯುವಕ..!

ಯುವಕನೋರ್ವ ಹೊಲದಲ್ಲಿದ್ದ ಚಿರತೆಯನ್ನು ತಾನೇ ಸೆರೆ ಹಿಡಿದು, ತನ್ನದೇ ಬೈಕಿನಲ್ಲಿ ಕಟ್ಟಿ ಸಾಗಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿರುವ ಅಪರೂಪದ ಮತ್ತು ವಿಚಿತ್ರ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು

Read More
ಕರಾವಳಿ

ಸಹೋದರರಿಂದ ಕೊಲೆಯಾದ ಸಂಪ್ಯದ ಉಸ್ಮಾನ್: ಸಂಪ್ಯ ಮಸೀದಿ ಖಬರ್ ಸ್ಥಾನದಲ್ಲಿ ದಫನ ಕಾರ್ಯ

ಪುತ್ತೂರು: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಜು.14ರಂದು ಸಂಪಾಜೆ ಸಮೀಪದ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋರರಿಂದಲೇ ಕೊಲೆಯಾದ ಸಂಪ್ಯದ ಉಸ್ಮಾನ್ ಅವರ ಮೃತದೇಹ ಜು.14ರಂದು ರಾತ್ರಿ 10.30ರ ಅಂದಾಜು ಸಂಪ್ಯ ಮಸೀದಿ ತಲುಪಿದ್ದು ಆ ಬಳಿಕ ಧಾರ್ಮಿಕ ವಿಧಿವಿಧಾನ ಬಳಿಕ ಮೃತದೇಹವನ್ನು ಸಂಪ್ಯ ಮಸೀದಿಗೊಳಪಟ್ಟ ಜಾಗದಲ್ಲಿ ದಫನ ಮಾಡಲಾಯಿತು.  ಈ ಸಂದರ್ಭದಲ್ಲಿ ಸಂಪ್ಯ ಜಮಾಅತರು ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು. ಉಸ್ಮಾನ್ ಅವರನ್ನು ಜಾಗದ ವಿಚಾರದಲ್ಲಿ ಸಹೋದರರಾದ ಸತ್ತಾರ್ ಮತ್ತು ರಫೀಕ್ ಅವರು ಚೂರಿಯಿಂದ ಇರಿದು ಹತ್ಯೆ ಮಾಡಿದ್ದರು. 

Read More
ಕರಾವಳಿರಾಜಕೀಯ

ಸುಳ್ಯ ಕಾಂಗ್ರೆಸ್: ಮುಂದುವರಿದ ಕಚ್ಚಾಟ; ಕಡಬ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಗೊಂದಲ, ತಳ್ಳಾಟ

ಸುಳ್ಯದಲ್ಲಿ ಕಾಂಗ್ರೆಸ್ ಆಂತರಿಕ ಕಚ್ಚಾಟ ಮತ್ತೆ ಮುಂದುವರಿದಿದೆ. ವಿಧಾನಸಭಾ ಚುನಾವಣೆಯ ಮೊದಲು ಪ್ರಾರಂಭಗೊಂಡಿದ್ದ ಭಿನ್ನಮತ, ಆಂತರಿಕ ಕಲಹ ಈಗ ಚುನಾವಣೆ ಮುಗಿದು ಫಲಿತಾಂಶ ಹೊರಬಂದ ಬಳಿಕ ವೂ

Read More
ಕರಾವಳಿಕ್ರೈಂ

ಸಂಪ್ಯ ನಿವಾಸಿ ಉಸ್ಮಾನ್ ಸುಳ್ಯದಲ್ಲಿ ಕೊಲೆ: ಬೆಚ್ಚಿ ಬೀಳಿಸಿದ ಸಹೋದರರ ಕೃತ್ಯ

ಭೂ ವಿವಾದಕ್ಕೆ ಸಂಬಂಧಪಟ್ಟಂತೆ ಸಹೋದರರಿಂದಲೇ ಅಣ್ಣ ಕೊಲೆಯಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಬಳಿಯ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ವರದಿಯಾಗಿದ್ದು ಮೃತ ವ್ಯಕ್ತಿಯನ್ನು ಸಂಪ್ಯ ನಿವಾಸಿ ಉಸ್ಮಾನ್

Read More
ಕರಾವಳಿಕ್ರೈಂ

ಸುಳ್ಯ: ಸಹೋದರರಿಂದ ಉಸ್ಮಾನ್ ಕಗ್ಗೊಲೆ

ಸುಳ್ಯ: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ಸಹೋದರರ ನಡುವಿನ ಗಲಾಟೆ ನಡೆದು ಓರ್ವ ಕೊಲೆಯಾದ ಘಟನೆ ವರದಿಯಾಗಿದೆ. ಸಹೋದರರ ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದು

Read More
ಕರಾವಳಿ

ಬಿಜೆಪಿಯವರು ಉಚಿತ ಬಸ್ಸಿನಲ್ಲಿ ಹೋಗುತ್ತಾರೆ, ಬಸ್ಸಿನಿಂದಿಳಿದು ಕಾಂಗ್ರೆಸ್ಸನ್ನು ದೂರುತ್ತಾರೆ: ರಮೇಶ್ ರೈ ಸಾಂತ್ಯ

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜ್ಯದ ಎಲ್ಲಾ ಜನತೆಗಗಿ ಐದು ಗ್ಯಾರಂಟಿಗಳನ್ನು ತಂದಿದೆ. ಇವುಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಗೆ ಈಗಾಗಲೇ ಚಾಲನೆ

Read More
ಆರೋಗ್ಯರಾಜ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಗರದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿದ್ದು, ಕಳೆದ 11 ದಿನಗಳಲ್ಲಿ 178 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ವರ್ಷ ಬಿಬಿಎಂಪಿ

Read More
error: Content is protected !!