ಕರಾವಳಿ

ಸರಕಾರಿ ಶಾಲೆಗೆ ಸುಣ್ಣ ಬಣ್ಣ.. ಶಾಲೆಗಳಲ್ಲಿ ಸ್ವಚ್ಛತೆ, ಶ್ರಮದಾನದ ಮೂಲಕ ಮಾದರಿಯಾದ ಅಂಬೇಡ್ಕರ್ ರಕ್ಷಣಾ ವೇದಿಕೆ

ಸುಳ್ಯ ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ನಾಗಪಟ್ಟಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹೊರ ಭಾಗದ ಗೋಡೆಗಳು ಮತ್ತು ಶಾಲಾ ಪರಿಸರದ ಕಂಬಗಳು,ಧ್ವಜಸ್ತಂಬಕ್ಕೆ ಬಣ್ಣ ಬಳಿದು ಪರಿಸರವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ್ದಾರೆ. ಸಂಘಟನೆಯ ವತಿಯಿಂದ ಸಂಪೂರ್ಣ ಬಣ್ಣದ ಮೊತ್ತವನ್ನು ಅಂಬೇಡ್ಕರ್ ರಕ್ಷಣಾ ವೇದಿಕೆಯ ನಾಗಪಟ್ಟಣ ಘಟಕದ ಸದಸ್ಯರಿಂದ ಸಂಗ್ರಹಿಸಿ ಈ ಕಾರ್ಯವನ್ನು ಮಾಡಿರುವುದು ಸ್ಥಳೀಯರಿಂದ ಶ್ಲಾಘನೆ ವ್ಯಕ್ತವಾಗಿದೆ. ಸ್ವಾತಂತ್ರೋತ್ಸವ ದಿನಾಚರಣೆಯಂದು ಶಾಲಾ ಶಿಕ್ಷಕರು ಸಂಘಟನೆಯ ಮುಖ್ಯಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ವೇದಿಕೆಯನ್ನು ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಎಂ ಅಂಬೇಡ್ಕರ್ ರಕ್ಷಣಾ ವೇದಿಕೆ ಸಂಘಟನೆಯು ಸೇವಾ ಮನೋಭಾವನೆಯನ್ನು ಹೊಂದಿಕೊಂಡಿದ್ದು ನಮ್ಮ ಶಾಲೆಗೆ ಉಚಿತವಾಗಿ ಶ್ರಮದಾನದ ಮೂಲಕ ಬಣ್ಣವನ್ನು ಬಳಿದು ಶಾಲೆಯ ಸ್ವಚ್ಛತೆಯನ್ನು ಮಾಡಿಕೊಟ್ಟಿರುವುದು ಸರ್ಕಾರಿ ಶಾಲೆಯ ಬಗ್ಗೆ ಇವರಲ್ಲಿ ಇರುವ ಗೌರವವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು. ಶ್ರಮದಾನದಲ್ಲಿ ಸಂಘಟನೆಯ ನಾಗಪಟ್ಣ ಘಟಕದ ಅಧ್ಯಕ್ಷ ಚಂದ್ರಶೇಖರ್, ಗೌರವಾಧ್ಯಕ್ಷ ಅರಸು ರತ್ನಂ,ಕಾರ್ಯದರ್ಶಿ ಗುರುರಾಜ್,ಉಪಾಧ್ಯಕ್ಷ ಅಶೋಕ,ಜೊತೆ ಕಾರ್ಯದರ್ಶಿ ಶ್ರೀಕಾಂತ್,ಸದಸ್ಯರುಗಳಾದ ಗುಣರೇಲನ್,ಜಗದೀಶ್, ರಾಜೇಶ್,ಮುರಳಿ, ಗೋವಿಂದರಾಜ್,ಪುರುಷೋತ್ತಮ ಮೊದಲಾದವರು ಪಾಲ್ಗೊಂಡಿದ್ದರು. ಈ ಬಗ್ಗೆ ಮಾತನಾಡಿರುವ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ‘ಶಾಲೆಗಳು ವಿದ್ಯಾ ಮಂದಿರವಾಗಿದ್ದು ಇದನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಸರಕಾರಿ ಶಾಲೆಗಳಲ್ಲಿ ಹೆಚ್ಚಿನ ಬಡ ವಿದ್ಯಾರ್ಥಿಗಳು ಕಲಿಯುತ್ತಿದ್ದು  ಸರ್ಕಾರಿ ಶಾಲೆ ಉಳಿಯಲಿ ಮತ್ತು ಬೆಳೆಯಲಿ ಎಂಬ ಉದ್ದೇಶದೊಂದಿಗೆ ಸಂಘಟನೆಯ ವತಿಯಿಂದ ಸರ್ಕಾರಿ ಶಾಲೆಗಳ ಬಗ್ಗೆ ಮುತುವರ್ಜಿಯನ್ನು ವಹಿಸಿ ಈ ರೀತಿಯ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ. ಇದೇ ರೀತಿ ಸುಳ್ಯ ತಾಲೂಕಿನ ವಿವಿಧ ಗ್ರಾಮಗಳ ಶಾಲೆಗಳಲ್ಲಿ ಸ್ವಚ್ಛತಾ ಶ್ರಮದಾನವನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ನಡೆಸಬೇಕೆಂಬ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.

Read More
ಕರಾವಳಿರಾಜಕೀಯ

ಕೊಳ್ತಿಗೆ ಗ್ರಾ.ಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಕೊಳ್ತಿಗೆ ಗ್ರಾಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಅಕ್ಕಮ್ಮರವರು ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ

Read More
ಕರಾವಳಿಕ್ರೈಂ

ಪುತ್ತೂರು: ಒಳಮೊಗ್ರು ಗ್ರಾಪಂ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಪುಂಜ, ಕೊಯಿಲತ್ತಡ್ಕ ಪರಿಸರದಲ್ಲಿ ಕಳ್ಳರ ಹಾವಳಿ ಕಂಡುಬಂದಿದ್ದು ಈಗಾಗಲೇ ಕೆಲವು ಅಂಗಡಿಗಳಿಂದ ಸಣ್ಣಪುಟ್ಟ ಕಳ್ಳತನ ನಡೆದಿರುವ ಬಗ್ಗೆ ವರದಿಯಾಗಿದೆ. ಕೆಲವು

Read More
ಕ್ರೈಂರಾಷ್ಟ್ರೀಯ

ಅಕ್ರಮ ಸಂಬಂಧ ಆರೋಪ: ಇಬ್ಬರನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು..!

ಜೋಡಿಯೊಂದನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿರುವ ಅಮಾನವೀಯ ಘಟನೆ ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ನಡೆದಿದೆ. ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ವ್ಯಕ್ತಿ, ಅದೇ

Read More
ರಾಷ್ಟ್ರೀಯ

ಬೈಕ್-ಮಿನಿ ಲಾರಿ ನಡುವೆ ಭೀಕರ ಅಪಘಾತ- ಇಬ್ಬರು ಯುವಕರು ಮೃತ್ಯು

ಬೈಕ್ ಹಾಗೂ ಮಿನಿ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾಸರಗೋಡು ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ. ಮೊಗ್ರಾಲ್

Read More
ಕರಾವಳಿ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆಯವರಿಂದ ಶಿಕ್ಷಕರಿಗೆ ಕಾರ್ಯಾಗಾರ:

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 19ರಂದು “ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವ” ಎಂಬ ವಿಷಯದ ಕುರಿತಾಗಿ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಯಿತು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ: ನೂತನ ಸಮಿತಿ ರಚನೆ, ಅಧ್ಯಕ್ಷರಾಗಿ ಹಾಜಿ ಇಬ್ರಾಹಿಂ ಸಾಗರ್ ಪುನರಾಯ್ಕೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ ಆ .18 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಿತು.

Read More
ಕರಾವಳಿ

ವಾಲಿಬಾಲ್ ಪಂದ್ಯಾಟ: ಬಾಲಕರ ವಿಭಾಗದಲ್ಲಿ ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್ ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: 2023-24 ನೇ ಶೈಕ್ಷಣಿಕ ವರ್ಷದ ಸವಣೂರು ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟ ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ನಡೆಯಿತು. ಸವಣೂರು ವಲಯ ಮಟ್ಟದ 13

Read More
ರಾಜ್ಯ

ಆ.30ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ- ಲಕ್ಷ್ಮೀ ಹೆಬ್ಬಾಳ್ಕರ್

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ.ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ

Read More
ರಾಜಕೀಯರಾಜ್ಯ

ಆ.23ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ- ಯಡಿಯೂರಪ್ಪ ನೇತೃತ್ವ

ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ

Read More
error: Content is protected !!