ಆಕರ್ಷಣ್ ಹಾಜಿಯವರಿಗೆ ಮಾತೃ ವಿಯೋಗ
ಪುತ್ತೂರು: ಆಕರ್ಷಣ್ ಹಾಜಿಯವರ ತಾಯಿ ನಿಧನಪುತ್ತೂರು: ಕುಂಬ್ರ ನಿವಾಸಿ ರುಖ್ಯಾ ಹಜ್ಜುಮ್ಮ ರವರು ಅಲ್ಪ ಕಾಲದ ಅಸೌಖ್ಯದಿಂದ ಮರೀಲ್ ನಲ್ಲಿರುವ ತನ್ನ ಮಗಳ ಮನೆಯಲ್ಲಿ ಅ.8 ರಂದು
Read Moreಪುತ್ತೂರು: ಆಕರ್ಷಣ್ ಹಾಜಿಯವರ ತಾಯಿ ನಿಧನಪುತ್ತೂರು: ಕುಂಬ್ರ ನಿವಾಸಿ ರುಖ್ಯಾ ಹಜ್ಜುಮ್ಮ ರವರು ಅಲ್ಪ ಕಾಲದ ಅಸೌಖ್ಯದಿಂದ ಮರೀಲ್ ನಲ್ಲಿರುವ ತನ್ನ ಮಗಳ ಮನೆಯಲ್ಲಿ ಅ.8 ರಂದು
Read Moreಸುಳ್ಯ ನ್ಯಾಯಾಲಯದ ಎಪಿಪಿ ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಾರ್ದನ್ ಬಿ ಮಂಗಳೂರು ಆರನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ವರ್ಗಾವಣೆ ಸುಳ್ಯ ನ್ಯಾಯಾಲಯದಲ್ಲಿ 3 ವರ್ಷಗಳಿಂದ
Read Moreಪುತ್ತೂರು: ವರ್ಷದ ಹಿಂದೆ ಪಾಟ್ರಕೋಡಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪಾಟ್ರಕೋಡಿಯಲ್ಲಿ ಭಾರಿ
Read Moreತುಮಕೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅಥವಾ ಶಶಿ ತರೂರ್ ಅವರಲ್ಲಿ ಯಾರು ಗೆದ್ದರೂ, ಅವರು ರಿಮೋಟ್ ಕಂಟ್ರೋಲರ್ ಆಗಿರಲಾರರು ಎಂದು ಕಾಂಗ್ರೆಸ್ ನಾಯಕ ರಾಹುಲ್
Read Moreರಾಯಚೂರು: ಜಿಲ್ಲೆಯ ಲಿಂಗಸುಗೂರು ಹೊರವಲಯದಲ್ಲಿ ನಡೆದಿದ್ದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಕೊಲೆ ಪ್ರಕರಣದ ಆರೋಪಿಗಳು ಸೆರೆ ಸಿಕ್ಕಿದ್ದಾರೆ. ಕೋಟಾ ಗ್ರಾಪಂ ಪಿಡಿಓ ಗಜದಂಡಯ್ಯ ಕೊಲೆಯಾಗಿದ್ದರು.
Read Moreಪುತ್ತೂರು: ಪುತ್ತೂರಿನ ನೆಹರೂ ನಗರದಲ್ಲಿ ಕಾರ್ಯಚರಿಸುತ್ತಿದ್ದ ಝಕೀ ಫರ್ನಿಚರ್ ಅಂಗಡಿಯ ಉದ್ಯಮಿ ಆಫಾಕ್ (38) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಗಡಿ ಕೋಣೆಯ ಮೇಲೆ ಇರುವ
Read Moreಮಂಗಳೂರು: ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪಿಸಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾಯ೯ಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಯಿತು. ಸ್ವಾತಂತ್ರ್ಯ
Read Moreಪುತ್ತೂರು: ಈಗಾಗಲೇ ಪ್ರತೀ ಗ್ರಾಪಂ ಮಟ್ಟದಲ್ಲಿ ಒಣ ಕಸ ಸಂಗ್ರಹಣಾ ಕೇಂದ್ರ ಸಿದ್ಧವಾಗಿದೆ. ಗ್ರಾಮೀಣ ಮಟ್ಟದಲ್ಲಿ ಹಸಿ ಕಸವನ್ನು ಮನೆಮನೆಗಳವರೇ ವಿಲೇವಾರಿ ಮಾಡುತ್ತಿದ್ದು, ಪ್ಲಾಸ್ಟಿಕ್ ಕಸ, ಮೆಡಿಕಲ್ ಕಸ ಮತ್ತು ಇ-ವೇಸ್ಟ್ಗಳನ್ನು ಗ್ರಾಪಂಗಳು ಸಂಗ್ರಹಿಸುತ್ತಿವೆ. ಸಂಗ್ರಹಿಸಿದ ಬಳಿಕ ಮುಂದಿನ ನಿರ್ವಹಣೆ ಮಾಡುವುದು ಎಲ್ಲ ಗ್ರಾಪಂಗಳಿಗೆ ಕಷ್ಟವಾದ ಕಾರಣ ಕೆದಂಬಾಡಿ ಗ್ರಾಪಂನಲ್ಲಿ 3 ತಾಲೂಕಿಗಳಿಗೆ ಸೇರಿದಂತೆ ಒಂದು ಘಟಕ ನಿರ್ಮಿಸಲಾಗುತ್ತಿದೆ ಅದೇ ಎಂ.ಆರ್.ಎಫ್ ಘಟಕ ಅಂದರೆ ಮೆಟೀರಿಯಲ್ ರಿಕವರಿ ಫೆಸಿಟಿಲಿ. ಕಾರ್ಕಳ ತಾಲೂಕಿನಲ್ಲಿ ನಿರ್ಮಿಸಲಾದ 10 ಟನ್ ಸಾಮರ್ಥ್ಯದ ಮೆಗಾ ಗಾತ್ರದ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರ (ಎಂಆರ್ಎಫ್) ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಮೊತ್ತಮೊದಲ ಎಂಆರ್ಎಫ್ ಪುತ್ತೂರು ತಾಲೂಕಿಗೆ ಮಂಜೂರಾಗಿದ್ದು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಂಗಳಾಡಿ ಸಮೀಪದ ಬೋಳೋಡಿ ಎಂಬಲ್ಲಿ 5 ಟನ್ ಸಾಮರ್ಥ್ಯದ ಘಟಕ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ. ಮುಂದಿನ 6 ತಿಂಗಳಲ್ಲಿ ಕಾಮಗಾರಿ ಮುಕ್ತಾಯಗೊಂಡು ಕಾರ್ಯಾರಂಭ ಮಾಡಲಿರುವ ಈ ಘಟಕದಲ್ಲಿ ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳ ಪ್ರತೀ ಗ್ರಾಪಂಗಳಿಂದ ಒಣ ಕಸವನ್ನು ಸಂಗ್ರಹಿಸಿ ಮರುಬಳಕೆಗೆ ಮಾದರಿಗೆ ಪರಿವರ್ತಿಸಿ ಬೇರೆ ಬೇರೆ ಕಡೆಯ ಕಾರ್ಖಾನೆಗಳಿಗೆ ಮಾರಾಟ ಮಾಡಲಾಗುತ್ತದೆ. ಈ ಘಟಕದಿಂದಾಗಿ ಯಾವುದೇ ರೀತಿಯ ಪರಿಸರ ಮಾಲಿನ್ಯವಾಗಲಿ, ವಾಸನೆ ಸಮಸ್ಯೆಯಾಗಲಿ ಇಲ್ಲದೇ ಇರುವ ಕಾರಣ ಬೋಳೋಡಿ ಪ್ರದೇಶದ ಜನರಿಂದ ಯಾವುದೇ ಆಕ್ಷೇಪಣೆ ಬಂದಿಲ್ಲ. ಕಾರ್ಕಳದ ನಿಟ್ಟೆಯಲ್ಲಿ ನಿರ್ಮಾಣವಾಗಿರುವ ಘಟಕವನ್ನು ಕೆದಂಬಾಡಿ ಗ್ರಾಪಂ ನಿಯೋಗ ಮತ್ತು ಬೋಳೋಡಿ ಪರಿಸರದ ಜನ ಖುದ್ದಾಗಿ ಪರಿಶೀಲಿಸಿರುವ ಕಾರಣ ಕೇಂದ್ರ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. 2 ಕೋಟಿ ಯೋಜನೆ:1.95 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಎಂಆರ್ಎಫ್ನಲ್ಲಿ 5ಟನ್ ಒಣ ಕಸವನ್ನು ಮರುಬಳಕೆಗೆ ಯೋಗ್ಯವಾದ ರೀತಿಯಲ್ಲಿ ಸನ್ನದ್ಧಗೊಳಿಸಲಾಗುತ್ತದೆ. ಈಗಾಗಲೇ ಸರಕಾರ ಅನುದಾನ ಮಂಜೂರು ಮಾಡಿ ಕೇಂದ್ರ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಬೋಳೋಡಿಯಲ್ಲಿ 1 ಎಕರೆ ಜಾಗವನ್ನು ಕೆದಂಬಾಡಿ ಗ್ರಾಪಂ ಇದಕ್ಕಾಗಿ ನೀಡಿದೆ. ಕೆಲವೇ ದಿನಗಳಲ್ಲಿ ಶಿಲಾನ್ಯಾಸ ಕಾರ್ಯ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ನಡೆಯಲಿದೆ. ನಿರ್ವಹಣೆ ವಿಧಾನ: ಗುತ್ತಿಗೆದಾರ ಕಂಪನಿ ಘಟಕ ನಿರ್ಮಿಸಿದ ಬಳಿಕ ಇದರ ನಿರ್ವಹಣೆಗೆ ಪ್ರತ್ಯೇಕ ಟೆಂಡರ್ ಆಹ್ವಾನಿಸಲಾಗುತ್ತದೆ. ವಹಿಸಿಕೊಂಡ ಸಂಸ್ಥೆಯವರು ಒಪ್ಪಂದದ ಆಧಾರದಲ್ಲಿ ನಿರ್ವಹಣೆ ಮಾಡಬೇಕಾಗುತ್ತದೆ. ಹೀಗಿರಲಿದೆ ಕಾರ್ಯವಿಧಾನ: 3 ತಾಲೂಕುಗಳ ಎಲ್ಲ ಗ್ರಾಪಂಗಳಿಂದ ಸಂಸ್ಥೆಯವರು ಒಣ ಕಸಗಳನ್ನು ಸಂಗ್ರಹಿಸುತ್ತಾರೆ. ಕಸ ಕೊಡುವುದರ ಜತೆಗೆ ನಿಗದಿ ಪಡಿಸಿದ ಮೊತ್ತವನ್ನು ಕೂಡ ಆಯಾ ಪಂಚಾಯಿತಿಯವರು ಸಂಸ್ಥೆಗೆ ನೀಡಬೇಕಾಗುತ್ತದೆ. ಸಂಗ್ರಹಗೊಂಡ ಒಣ ಕಸವನ್ನು ತಿಂಗಳಾಡಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಕೇಂದ್ರದಲ್ಲಿ ಸಮಗ್ರವಾಗಿ ವಿಂಗಡಿಸಲಾಗುತ್ತದೆ. ಬಳಿಕ ಪ್ಲಾಸ್ಟಿಕ್ ಕಸಗಳನ್ನು ಕೂಡ ಪ್ರತ್ಯೇಕಿಸಿ ನಿರ್ದಿಷ್ಟ ಯಂತ್ರದ ಮೂಲಕ ಅವುಗಳನ್ನು ಬಂಡಲ್ ಮಾದರಿಗೆ ಪರಿವರ್ತಿಸಲಾಗುತ್ತದೆ. ಮರುಬಳಕೆಗೆ ಯೋಗ್ಯವಾಗುವ ರೀತಿಯಲ್ಲಿ ಸಂಸ್ಕರಿಸಿದ ಬಳಿಕ ಕಾರ್ಖಾನೆಗಳಿಗೆ ಮಾರಲಾಗುತ್ತದೆ. ಗ್ರಾಮಾಂತರದ ಮೊದಲ ಘಟಕ: ಕಾರ್ಕಳದ ನಿಟ್ಟೆಯ ಘಟಕದಲ್ಲಿ ಒಂದು ಕೆ.ಜಿ. ಒಣ ತ್ಯಾಜ್ಯಕ್ಕೆ 3.50 ರೂ.ಗಳಂತೆ ಗ್ರಾಪಂಗಳು ನಿರ್ವಹಣಾ ಸಂಸ್ಥೆಗೆ ಪಾವತಿಸುತ್ತಾರೆ. ಇದು ಗ್ರಾಪಂಗಳಿಗೆ ಸುಲಭ ವಿಧಾನ. ತಾವೇ ನಿರ್ವಹಣಾ ಕಾರ್ಯ ಮಾಡುವುದು ಅತ್ಯಂತ ವೆಚ್ಚದಾಯಕ. ಇದೀಗ ತಿಂಗಳಾಡಿ ಸಮೀಪ ನಿರ್ಮಾಣವಾಗಲಿರುವ ಕೇಂದ್ರ ದ.ಕ. ಜಿಲ್ಲೆಯ ಗ್ರಾಮಾಂತರ ಪ್ರದೇಶದ ಮೊದಲನೆಯದು. ಮಂಗಳೂರಿನಲ್ಲೂ ಇಂಥದೇ ಘಟಕ ನಿರ್ಮಾಣವಾಗಲಿದೆ. ಕೆದಂಬಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಎಂಆರ್ಎಫ್ ನಿರ್ಮಾಣವಾಗುವ ಕಾರಣ ನಮ್ಮ ಗ್ರಾಪಂನ ತ್ಯಾಜ್ಯಗಳನ್ನು ಸಂಸ್ಥೆಯವರು ಉಚಿತವಾಗಿ ಸಂಗ್ರಹಿಸುತ್ತಾರೆ ಎನ್ನುತ್ತಾರೆ ಕೆದಂಬಾಡಿ ಗ್ರಾ.ಪಂ ಅಧ್ಯಕ್ಷ ರತನ್ ರೈ ಕುಂಬ್ರ
Read Moreಪುತ್ತೂರು: ವ್ಯಕ್ತಿಯೊಬ್ಬರಿಗೆ ಎಸೆದ ಬಾಟಲಿ ಇನ್ನೊಬ್ಬರಿಗೆ ತಾಗಿ ಅವರು ಗಾಯಗೊಂಡ ಘಟನೆ ಕಬಕ ಕರ್ನಾಟಕ ಬ್ಯಾಂಕ್ನ ಆವರಣದಲ್ಲಿ ಆ.7ರಂದು ನಡೆದಿರುವ ಬಗ್ಗೆ ವರದಿಯಾಗಿದೆ. ಕಬಕ ಪಂಜುರ್ಲಿಪಾದೆ ಉಮೇಶ್
Read Moreಪುತ್ತೂರು: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಭೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅ.7ರಂದು ನಡೆಯಿತು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ವಿ.ಎಚ್ ಅಬ್ದುಲ್ ಶಕೂರ್
Read More