ಕರಾವಳಿಕ್ರೈಂ

ಪುತ್ತೂರು: ಯುವಕನಿಂದ ಚೂರಿ ಇರಿತ: ಯುವತಿ ಮೃತ್ಯು



ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಯುವಕನೋರ್ವ ಯುವತಿಗೆ ಚಾಕುವಿನಿಂದ ಇರಿದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವಿಟ್ಲ ಸಮೀಪದ ಅಳಿಕೆ ನಿವಾಸಿ ಗೌರಿ (18) ಚೂರಿ ಇರಿತಕ್ಕೆ ಒಳಗಾದವರು.


ಆ. 24ರಂದು ಮಾಧ್ಯಾಹ್ನ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿ ಪದ್ಮರಾಜ್ ಚಾಕುವಿನಿಂದ 3 ರಿಂದ ನಾಲ್ಕು ಬಾರಿ ಇರಿದು ಗಂಭಿರವಾಗಿ ಗಾಯಗೊಳಿಸಿದ್ದಾನೆ. ಬಳಿಕ ಬೈಕನ್ನು ಘಟನಾ ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.


ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಲಾಯಿತಾದರು ಆ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!