ಕರಾವಳಿಕ್ರೈಂ

ಸುಳ್ಯ: ಅಡ್ಕಾರು ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ನಾಲ್ವರಿಗೆ ಕಾರು ಡಿಕ್ಕಿ-ಓರ್ವ ಮೃತ್ಯು



ಸುಳ್ಯ: ಅಡ್ಕಾರಿನ ಹೊಟೇಲ್ ವೊಂದರ ಬಳಿ ಇಂದು ಬೆಳ್ಳಂಬೆಳಗ್ಗೆ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಹುಣಸೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರು ಕೆಲಸದ ನಿಮಿತ್ತ ನಿನ್ನೆ ಅಡ್ಕಾರಿಗೆ ಆಗಮಿಸಿ ಕರಾವಳಿ ಹೋಟೆಲ್ ಎದುರುಗಡೆ ಇರುವ ಅಂಗಡಿಯೊಂದರ ವರಾಂಡದಲ್ಲಿ ಆಶ್ರಯ ಪಡೆದಿದ್ದರು. ಇಂದು ಬೆಳಿಗ್ಗೆ ಅವರಲ್ಲಿ ನಾಲ್ಕು ಮಂದಿ ಕಾರ್ಮಿಕರು ರಸ್ತೆ ಬದಿ ನಿಂತಿದ್ದರೆನ್ನಲಾಗಿದೆ.


ಬೆಳಗ್ಗೆ ಹುಣಸೂರು ಕಡೆಯಿಂದ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಂದು ರಸ್ತೆ ಬದಿ ನಿಂತಿದ್ದ ನಾಲ್ವರು ಕಾರ್ಮಿಕರಿಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆಯಿತು.


ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರಿಗೂ ಗಂಭೀರ ಗಾಯಗಳಾಗಿತ್ತು. ಅದರಲ್ಲಿ ಓರ್ವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಉಳಿದ ಮೂವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲೆಸಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!