ಬಿ ಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್
ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಗದೀಶ್ ಶೆಟ್ಟರ್ ಮೊದಲು ತಮ್ಮ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದು ಹೇಳಿದ್ದಾರೆ.
![](https://newsbites.in/wp-content/uploads/2023/09/IMG_20230901_134532.jpg)
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಶೆಟ್ಟರ್
ಕಾಂಗ್ರೆಸ್ 135 ಶಾಸಕರನ್ನೊಳಗೊಂಡ ಗಟ್ಟಿಮುಟ್ಟಾದ ಸರ್ಕಾರ, ಇಂಥ ಸರ್ಕಾರವನ್ನು ಯಾರು ತಾನೆ ಬಿಟ್ಟು ಹೋಗಲು ಸಾಧ್ಯ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಬಿಜೆಪಿ ಒಂದು ಮುಳುಗುವ ಹಡಗಿನ ಸ್ಥಿತಿಯಲ್ಲಿದೆ, ಸಂತೋಷ್ ತಮ್ಮ ಶಾಸಕರನ್ನು ಉಳಿಸಿಕೊಳ್ಳುವ ಪ್ರಯತ್ನ ಮೊದಲು ಮಾಡಲಿ ಎಂದರು.