ರಾಜಕೀಯರಾಜ್ಯರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ: ಯಡಿಯೂರಪ್ಪ



ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಸಹಮತ ಇದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೊತೆಗೆ ದೇವೇಗೌಡರು ಈಗಾಗಲೇ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು.ಲ್ ಮಾತುಕತೆ ಪ್ರಕಾರ ಜೆಡಿಎಸ್ಗೆ ನಾಲ್ಕು ಸೀಟು ಕೊಡಲು ಒಪ್ಪಿದ್ದಾರೆ. ದೆಹಲಿ ನಾಯಕರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿರುತ್ತೇವೆ. ಇದರಿಂದ 27-28 ಕ್ಷೇತ್ರ ಗೆಲ್ಲಲು ಅನುಕೂಲವಾಗಲಿದೆ. ಯಾವುದೇ ತೀರ್ಮಾನ ದೆಹಲಿಯವರು ತೆಗೆದುಕೊಂಡರೂ ಸ್ವಾಗತಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿರುವುದಾಗಿ ವರದಿಯಾಗಿದೆ.

ಎಲ್ಲರೂ ಒಟ್ಟಾಗಿ ದೆಹಲಿ ನಾಯಕರ ತೀರ್ಮಾನದಂತೆ ಹೆಚ್ಚು ಸೀಟು ಗೆಲ್ಲಲು ಪ್ರಯತ್ನ ಮಾಡುತ್ತೇವೆ. ನಾನು ಕೂಡಾ ವರಿಷ್ಠರ ಜೊತೆ ಮಾತನಾಡುತ್ತೇನೆ, ಅವರ ಜೊತೆ ಚರ್ಚೆ ಮಾಡಿ ಅಂತಿಮ ತೀರ್ಮಾನಕ್ಕೆ ಬರುತ್ತೇವೆ ಎಂದು ಅವರು ಹೇಳಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!