ಕರಾವಳಿ

ಪುತ್ತೂರು: ಕಾಂಗ್ರೆಸ್ ಮುಖಂಡ – ದೇವತಾ ಸಮಿತಿಯ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ ನಿಧನ



ಪುತ್ತೂರು: ಇತಿಹಾಸ ಪ್ರಸಿದ್ದ ಕಿಲ್ಲೆ ಮೈದಾನದ ಸಾರ್ವಜನಿಕ ಮಹಾಗಣೇಶೋತ್ಸವದ ದೇವತಾ ಸಮಿತಿ ಅಧ್ಯಕ್ಷರು ಮತ್ತು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ ಎನ್.ಸುಧಾಕರ್ ಶೆಟ್ಟಿಯವರು ಸೆ.10ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರು ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ ಗೀತಾ. ಪುತ್ರರಾದ ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅಭಿಷೇಕ್ ಮತ್ತು ಅಭಿಜೀತ್ ರವರನ್ನು ಅಗಲಿದ್ದಾರೆ.


ಶ್ರೀ ದೇವತಾ ಸಮಿತಿಯ ಕಿಲ್ಲೆ ಮೈದಾನದಲ್ಲಿ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವನ್ನು 44 ವರ್ಷಗಳಿಂದ ಎನ್.ಸುಧಾಕರ್ ಶೆಟ್ಟಿಯವರು ನೇತೃತ್ವ ವಹಿಸಿ ಮುಂದುವರಿಸುತ್ತಾ ಬಂದಿದ್ದರು. ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಸಂಚಾಲಕರಾಗಿ, 10 ವರ್ಷಗಳ ಕಾಲ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, 2 ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

Leave a Reply

Your email address will not be published. Required fields are marked *

error: Content is protected !!