ಕರಾವಳಿರಾಜಕೀಯ

ಗ್ಯಾರಂಟಿ ಯೋಜನೆಯಿಂದ ಕಂಗಾಲಾಗಿರುವ ಬಿಜೆಪಿ
ಅಸ್ತಿತ್ವ ಉಳಿಸುವುದಕ್ಕೋಸ್ಕರ ಪ್ರತಿಭಟನೆ ಮಾಡುತ್ತಿದೆ: ಕಾಂಗ್ರೆಸ್




ಪುತ್ತೂರು: ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯ ಕಾರಣಕ್ಕೆ ಬಿಜೆಪಿ ತತ್ತರಿಸಿಹೋಗಿದ್ದು ಅಸ್ತಿತ್ವ ಉಳಿಸುವುದಕ್ಕೋಸ್ಕರ ಪ್ರತಿಭಟನೆ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಹೇಳಿದ್ದಾರೆ.


ಸೆ.13 ರಂದು ಪುತ್ತೂರಿನಲ್ಲಿ ರಾಜ್ಯ ಸರಕಾರದ ವಿರುದ್ದ ಪುತ್ತೂರು ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯನ್ನು ವ್ಯಂಗ್ಯವಾಡಿದ ಬ್ಲಾಕ್ ಅಧ್ಯಕ್ಷರು ಇದು ಪ್ರತಿಭಟನೆಗೋಸ್ಕರ ನಡೆದ ಪ್ರತಿಭಟನೆಯಾಗಿದೆ, ಪುತ್ತೂರಿನಲ್ಲಿ ಬಿಜೆಪಿಗೆ ಉಳಿಗಾಲವಿಲ್ಲದಂತ ಪರಿಸ್ಥಿತಿ ಇದೆ, ಕಾರ್ಯಕರ್ತರಿಲ್ಲದೆ ಬಿಜೆಪಿ ಕಂಗಾಲಾಗಿದೆ, ರಾಜ್ಯದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ ಇದನ್ನು ಸಹಿಸಲು ಬಿಜೆಪಿಗೆ ಆಗುತ್ತಿಲ್ಲ ಈ ಕಾರಣಕ್ಕೆ ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡುವುದಕ್ಕೆ ಮುಂದಾಗಿದೆ. ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಲ್ಲಿ ಈ ಪ್ರತಿಭಟನಾ ನಾಟಕ ಇಂದು ಪ್ರದರ್ಶನವಾಗಿದೆ ವಿನಃ ಅವರು ಮಡಿದ ಆರೋಪದಲ್ಲಿ ಎಳ್ಳಷ್ಟು ಸತ್ಯವಿಲ್ಲ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಸರಕರದ ಗ್ಯಾರಂಟಿ ಯೋಜನೆಯ ಫಲವಾಗಿ ಇಂದು ರಾಜ್ಯಾದ್ಯಂತ ಬಿಜೆಪಿ ನಾಯಕರು, ಕಾರ್ಯಕರ್ತರು ಕಾಂಗ್ರೆಸ್ ಕುಟುಂಬಕ್ಕೆ ಸೇರ್ಪಡೆಯಗುತ್ತಿದ್ದಾರೆ ಇದೆಲ್ಲವೂ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕರ ಅಭಿವೃದ್ದಿ ಕೆಲಸವನ್ನು ಕಂಡು ಬಿಜೆಪಿಗರು ಬೆಚ್ಚಿ ಬಿದ್ದಿದ್ದಾರೆ ಅದರ ಪರಿಣಾಮವೇ ಇಂದು ನಡೆದ ಪ್ರತಿಭಟನೆಯಾಗಿದೆ ಎಂದು ಎಂ ಬಿ ವಿಶ್ವನಾಥ ರೈ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!