ಅಂತಾರಾಷ್ಟ್ರೀಯಕ್ರೀಡೆ

ಏಷ್ಯಾ ಕಪ್ ಕ್ರಿಕೆಟ್ ಫೈನಲ್: ಶ್ರೀಲಂಕಾವನ್ನು ಬಗ್ಗುಬಡಿದ ಭಾರತ ಚಾಂಪಿಯನ್



ಕೊಲಂಬೊ: ಏಷ್ಯಾ ಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ ಸುಲಭ ಜಯ ಸಾಧಿಸಿದೆ.
ಪ್ರೇಮದಾಸ ಸ್ಟೇಡಿಯಂನಲ್ಲಿ ಮೊದಲು ಬ್ಯಾಟಿಂಗ್ ಮಾಡಿ ಲಂಕಾ ಕೇವಲ 15.2 ಓವರ್ ಗಳಲ್ಲಿ 50 ರನ್ ಗೆ ಆಲೌಟಾಯಿತು.

ಆರು ವಿಕೆಟ್ ಕಿತ್ತ ಮೊಹಮದ್ ಸಿರಾಜ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಲಂಕಾ ಪರ 17 ರನ್ ಗಳಿಸಿದ ಕುಸಾಲ್ ಮೆಂಡಿಸ್ ಅವರದ್ದೇ ಹೆಚ್ಚಿನ ರನ್. ಸಿರಾಜ್ 21 ರನ್ ನೀಡಿ ಆರು ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ ಕೊನೆಯ ಮೂರು ವಿಕೆಟ್ ಕಿತ್ತರು. ಬುಮ್ರಾ ಅವರು ಒಂದು ವಿಕೆಟ್ ಪಡೆದರು.

ಸುಲಭ ಗುರಿ ಬೆನ್ನತ್ತಿದ ಭಾರತ ತಂಡದ ಪರ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಿದರು. ತಂಡವು ವಿಕೆಟ್ ಕಳೆದುಕೊಳ್ಳದೆ ಕೇವಲ 6.1 ಓವರ್ ಗಳಲ್ಲಿ ಗುರಿ ತಲುಪಿ ಜಯ ಸಾಧಿಸಿತು.

Leave a Reply

Your email address will not be published. Required fields are marked *

error: Content is protected !!